September 6, 2026
ವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

ಮಡಂತ್ಯಾರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 55 ನೇ ವರ್ಷದ ವಾರ್ಷಿಕ ಮಹಾಸಭೆ, ಸಾಧಕರ ರೈತರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಸ್ತಾಂತರ ಕಾರ್ಯಕ್ರಮವು ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸರವರ ಅಧ್ಯಕ್ಷತೆಯಲ್ಲಿ ಜು.13 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು.

ಸಂಘದ ಕಾರ್ಯಕ್ಷೇತ್ರವು ಮಾಲಾಡಿ, ಸೋಣಂದೂರು, ಪಾರೆಂಕಿ, ಕುಕ್ಕಳ ಈ ನಾಲ್ಕು ಗ್ರಾಮಗಳನ್ನು ಒಳಗೊಂಡಿದೆ. ಸಂಘವು ಆರ್ಥಿಕ ವರ್ಷಾಂತ್ಯದಲ್ಲಿ 455.79 ಕೋಟಿ ಉತ್ತಮ ವ್ಯವಹಾರ ನಡೆಸಿ, ಶೇ. 97 ಸಾಲ ವಸೂಲಾತಿಯನ್ನು ಮಾಡಿ 2024-25 ನೇ ಆರ್ಥಿಕ ವರ್ಷದಲ್ಲಿ 16255756.84 ಲಾಭ ಗಳಿಸಿದೆ. ರೈತ ಸದಸ್ಯರಿಗೆ ಶೇ.15% ಡಿವಿಡೆಂಟ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸ ಹೇಳಿದರು.

ಮಹಾಸಭೆ ಕಾರ್ಯಕ್ರಮದಲ್ಲಿ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಪರಿಶ್ರಮ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಧಕ ವಿಧ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ,ವಿದ್ಯಾರ್ಥಿ ವೇತನ ಹಸ್ತಾಂತರ ಮಾಡಲಾಯಿತು.

ಮಹಾಸಭೆಯಲ್ಲಿ ಉಪಾಧ್ಯಕ್ಷ ಕಾಂತಪ್ಪ ಗೌಡ,ನಿರ್ದೇಶಕರಾದ ಕೆ.ಅರವಿಂದ ಜೈನ್,ಶ್ರೀಮತಿ ಧನಲಕ್ಷ್ಮಿ,ಶ್ರೀಮತಿ ಅಮಿತಾ ಪ್ರಿಯಾ ಲೋಬೋ,ಸುರೇಶ್ ಎಸ್,ಕುಮಾರ ನಾಯ್ಕ,ಮಹಾಬಲ ಕೆ,ಗಣೇಶ್ ಮೂಲ್ಯ,ಗೋಪಾಲಕೃಷ್ಣ ಕೆ,ಕಿಶೋರ್ ಕುಮಾರ್ ಶೆಟ್ಟಿ, ಬಿ.ಪದ್ಮನಾಭ ಸಾಲಿಯಾನ್ ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜೋಕಿಂ ಡಿಸೋಜ ಉಪಸ್ಥಿತರಿದ್ದರು.

ಸಂಘದ ಸಿಬ್ಬಂದಿಗಳು, ಸಹಕಾರಿ ಸದಸ್ಯರು ಸಹಕರಿಸಿದರು. ಮಧ್ಯಾಹ್ನ ಶುಚಿ ರುಚಿಯಾದ ವೆಜ್ & ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya
error: Content is protected !!