22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಕಡಬ, ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ. ಎಂಬವರ ದೂರಿನಂತೆ, ಜು.11 ರಂದು ತನ್ನ ಪೇಸ್‌ ಬುಕ್‌ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಪ್ರವೀಣ್‌ ಲೊಬೋ ಎಂಬ ಪೇಸ್ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇನ್ನೊಂದು ಪ್ರಕರಣದಲ್ಲಿ, ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್‌ ಎನ್‌ ಎಂಬವರ ದೂರಿನಂತೆ, ಜು.11ರಂದು ಮೊಬೈಲ್ ನಲ್ಲಿ ತನ್ನ ಫೇಸ್ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಡಾಕ್ಟರ್ ವರ್ಮಾ ಎಂಬ ಪೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಹಾಗೂ ಆಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದು ಕಂಡುಬಂದಿರುತ್ತದ್ದು, ಈ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 59/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!