September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಕಡಬ, ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ. ಎಂಬವರ ದೂರಿನಂತೆ, ಜು.11 ರಂದು ತನ್ನ ಪೇಸ್‌ ಬುಕ್‌ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಪ್ರವೀಣ್‌ ಲೊಬೋ ಎಂಬ ಪೇಸ್ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇನ್ನೊಂದು ಪ್ರಕರಣದಲ್ಲಿ, ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್‌ ಎನ್‌ ಎಂಬವರ ದೂರಿನಂತೆ, ಜು.11ರಂದು ಮೊಬೈಲ್ ನಲ್ಲಿ ತನ್ನ ಫೇಸ್ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಡಾಕ್ಟರ್ ವರ್ಮಾ ಎಂಬ ಪೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಹಾಗೂ ಆಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದು ಕಂಡುಬಂದಿರುತ್ತದ್ದು, ಈ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 59/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಬಂದಾರು: ಮೈರೋಳ್ತಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬ್ಯಾಗು, ಕೊಡೆ ವಿತರಣೆ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya
error: Content is protected !!