ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಕುಟ್ಟಿಕಲ ಜಿಲ್ಲಾ ಪಂಚಾಯತಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಒಂದನೇ ತರಗತಿಯ ಪ್ರಾರಂಭೋತ್ಸವ ಜು 11 ರಂದು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಬಿ ಅಬ್ದುಲ್ ರಜಾಕ್ ಉದ್ಘಾಟಿಸಿದರು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ತೆಕ್ಕಾರು ಸಿಎ ಬ್ಯಾಂಕ್ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹಾರಿಸ್ ಹಾಗೂ ಎಸ್. ಡಿ.ಎಂ.ಸಿ ಉಪಾಧ್ಯಕ್ಷರಾದ ವಸಂತಿ. ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾ ದ ಮೀನಾಕ್ಷಿ ಹಾಗೂ ಶಾಲಾ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು. ಪೋಷಕರು ಹಳೆ ವಿದ್ಯಾರ್ಥಿಗಳು ಉಪಸ್ಥಿದ್ದರು







