30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿ

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ವಲಯದ ಕಳಿಯ ವಿಭಾಗದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ ಜು. 13ರಂದು ನಡೆಯಿತು. ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ ರವರು ದೀಪ ಬೆಳಗಿಸಿ ಮಹಿಳೆಯರು ನಾಲ್ಕು ಗೋಡೆಯಿಂದ ಹೊರ ಬಂದು ಸಮಾಜದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡಬೇಕಾದರೆ ಮಾತೃಶ್ರೀ ಹೇಮಾವತಿ ಅಮ್ಮನವರು ಪ್ರಾರಂಭಿಸಿದ ಜ್ಞಾನ ವಿಕಾಸ ಕೇಂದ್ರದಿoದ ಎಂದರು

. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಯಶೋಧರ ಸರ್ ರವರು ಜ್ಞಾನ ವಿಕಾಸ ಕೇಂದ್ರವು ಮಹಿಳೆಯರಿಗೆ ಉತ್ತಮ ಮಾಹಿತಿ ಯೊಂದಿಗೆ ಆತ್ಮ ಸ್ಥೈರ್ಯ ವನ್ನು ನೀಡುತ್ತದೆ. ಕೇಂದ್ರವು ಉತ್ತಮ ರೀತಿಯಲ್ಲಿ ಮುಂದುವರಿಯಲು ಆಸಕ್ತಿ ಮುಖ್ಯವಾಗಿರುತ್ತದೆ ಎಲ್ಲರೂ ಕೇಂದ್ರದ ಸಭೆಯಲ್ಲಿ ಆಸಕ್ತಿ ಯಿಂದ ಭಾಗವಹಿಸುವಂತೆ ತಿಳಿಸಿದರು . ಒಕ್ಕೂಟದ ಅಧ್ಯಕ್ಷ ರಾದ ಶ್ರೀಮತಿ ಸುಬಾಷಿಣಿ , ಗ್ರಾಮ ಪಂಚಾಯತ್ ಸದಸ್ಯರಾದ ಕುಸುಮ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೇಂದ್ರದ ದಾಖಲಾತಿ ಯನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಸೌಮ್ಯ ಸ್ವಾಗತಿಸಿ ತಿಲೋತ್ತಮ ರವರು ಧನ್ಯವಾದ ನೀಡಿದರು.

Related posts

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya
error: Content is protected !!