July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

ಮಡಂತ್ಯಾರು:ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ,ಫಾದರ್ ಮುಲ್ಲರ್ ಆಸ್ಪತ್ರೆ, ಮಂಗಳೂರು ಫಾ | ಎಲ್. ಎಂ. ಪಿಂಟೋ ಆಸ್ಪತ್ರೆ, ಬದ್ಯಾರು ಮತ್ತು ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯೂತ್ ರೆಡ್ ಕ್ರಾಸ್,ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರವು ವಾರ್ಷಿಕ ಮಹಾಸಭೆಯ ಮೊದಲ ಅಂಗವಾಗಿ ಜು. 13ರಂದು ನಡೆಯಿತು.

ಶಾಸಕ ಹರೀಶ್ ಪೂಂಜರವರು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಆರ್ಥಿಕ ಸ್ವಾಸ್ಥ್ಯ ಕಾಪಾಡುವ ಜೊತೆಗೆ ಸಮಾಜದ ಆರೋಗ್ಯ ಕಾಪಾಡುವ ಕೆಲಸವನ್ನು ಮಾಡುತ್ತಿರುವ ಮಡಂತ್ಯಾರು ಸಿಎ ಬ್ಯಾಂಕ್ ಸಮಾಜಕ್ಕೆ ಮಾದರಿಯಾಗಿದೆ ಎಂದರು.ಧರ್ಮಗುರುಗಳು ಹಾಗೂ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಮಚಾಲಕರಾದ ವಂ.ಸ್ವಾಮಿ ಡಾ.ಸ್ಟಾನಿ ಗೋವಿಯಸ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಅತಿಥಿಗಳಾಗಿ ಎಂಎಲ್ಸಿ ಕೆ.ಪ್ರತಾಪಸಿಂಹ ನಾಯಕ್,ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ,ಮಂಗಳೂರು ಇಂಡಿಯನ್ ಕ್ಯಾನ್ಸರ್ ಸೊಸೈಟಿ ರಿಜಿನಲ್ ಸಂಯೋಜಕರಾದ ರಂಜನ್ ಎ.ವಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಘದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸುವ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.ವೇದಿಕೆಯಲ್ಲಿ ಬದ್ಯಾರು ಪಾ.ಎಲ್.ಎಂ ಪಿಂಟೋ ಆಸ್ಪತ್ರೆಯ ಮುಖ್ಯಸ್ಥರಾದ ಸಿಸ್ಟರ್ ಜಾನೆಟ್ ರೇಗೋ,ಡಾ.ವಿಲ್ಬರ್,ಸಂಘದ ಉಪಾಧ್ಯಕ್ಷ ಕಾಂತಪ್ಪ ಗೌಡ,ನಿರ್ದೇಶಕರಾದ ಶ್ರೀಮತಿ ಧನಲಕ್ಷ್ಮಿ,ಶ್ರೀಮತಿ ಅಮಿತಾ ಪ್ರಿಯಾ ಲೋಬೋ,ಸುರೇಶ್ ಎಸ್,ಮಹಾಬಲ ಕೆ,ಗಣೇಶ್ ಮೂಲ್ಯ,ಗೋಪಾಲಕೃಷ್ಣ ಕೆ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜೋಕಿಂ ಡಿಸೋಜ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ ಪ್ರಾಸ್ತವಿಕ ಮಾತನಾಡಿ ಸ್ವಾಗತಿಸಿದರು. ಪ್ರಾನ್ಸಿಸ್ ವಿವಿ ಕಾರ್ಯಕ್ರಮ ನಿರೂಪಿಸಿದರು. ಕಾಂತಪ್ಪ ಗೌಡ ವಂದಿಸಿದರು. ಪೂರ್ಣಿಮಾ ಪ್ರಾರ್ಥನೆ ಹಾಡಿದರು.

Related posts

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya
error: Content is protected !!