23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

ಮಡಂತ್ಯಾರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 55 ನೇ ವರ್ಷದ ವಾರ್ಷಿಕ ಮಹಾಸಭೆ, ಸಾಧಕರ ರೈತರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಸ್ತಾಂತರ ಕಾರ್ಯಕ್ರಮವು ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸರವರ ಅಧ್ಯಕ್ಷತೆಯಲ್ಲಿ ಜು.13 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು.

ಸಂಘದ ಕಾರ್ಯಕ್ಷೇತ್ರವು ಮಾಲಾಡಿ, ಸೋಣಂದೂರು, ಪಾರೆಂಕಿ, ಕುಕ್ಕಳ ಈ ನಾಲ್ಕು ಗ್ರಾಮಗಳನ್ನು ಒಳಗೊಂಡಿದೆ. ಸಂಘವು ಆರ್ಥಿಕ ವರ್ಷಾಂತ್ಯದಲ್ಲಿ 455.79 ಕೋಟಿ ಉತ್ತಮ ವ್ಯವಹಾರ ನಡೆಸಿ, ಶೇ. 97 ಸಾಲ ವಸೂಲಾತಿಯನ್ನು ಮಾಡಿ 2024-25 ನೇ ಆರ್ಥಿಕ ವರ್ಷದಲ್ಲಿ 16255756.84 ಲಾಭ ಗಳಿಸಿದೆ. ರೈತ ಸದಸ್ಯರಿಗೆ ಶೇ.15% ಡಿವಿಡೆಂಟ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ಸ ಹೇಳಿದರು.

ಮಹಾಸಭೆ ಕಾರ್ಯಕ್ರಮದಲ್ಲಿ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಪರಿಶ್ರಮ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಧಕ ವಿಧ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ,ವಿದ್ಯಾರ್ಥಿ ವೇತನ ಹಸ್ತಾಂತರ ಮಾಡಲಾಯಿತು.

ಮಹಾಸಭೆಯಲ್ಲಿ ಉಪಾಧ್ಯಕ್ಷ ಕಾಂತಪ್ಪ ಗೌಡ,ನಿರ್ದೇಶಕರಾದ ಕೆ.ಅರವಿಂದ ಜೈನ್,ಶ್ರೀಮತಿ ಧನಲಕ್ಷ್ಮಿ,ಶ್ರೀಮತಿ ಅಮಿತಾ ಪ್ರಿಯಾ ಲೋಬೋ,ಸುರೇಶ್ ಎಸ್,ಕುಮಾರ ನಾಯ್ಕ,ಮಹಾಬಲ ಕೆ,ಗಣೇಶ್ ಮೂಲ್ಯ,ಗೋಪಾಲಕೃಷ್ಣ ಕೆ,ಕಿಶೋರ್ ಕುಮಾರ್ ಶೆಟ್ಟಿ, ಬಿ.ಪದ್ಮನಾಭ ಸಾಲಿಯಾನ್ ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜೋಕಿಂ ಡಿಸೋಜ ಉಪಸ್ಥಿತರಿದ್ದರು.

ಸಂಘದ ಸಿಬ್ಬಂದಿಗಳು, ಸಹಕಾರಿ ಸದಸ್ಯರು ಸಹಕರಿಸಿದರು. ಮಧ್ಯಾಹ್ನ ಶುಚಿ ರುಚಿಯಾದ ವೆಜ್ & ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು.

Related posts

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya
error: Content is protected !!