July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

ಅಳದಂಗಡಿ: ಬೆಳೆಯುತ್ತಿರುವ ಅಳದಂಗಡಿ ಪ್ರದೇಶದಲ್ಲಿ ದಿನನಿತ್ಯ ವ್ಯಾಪರ ವಹಿವಾಟು ಬಹಳ ಜೋರಾಗಿ ನಡೆಯುತ್ತಿದೆ. ಕೆಲವೇ ಕೆಲವು ಅಂಗಡಿ ಮುಂಗಟ್ಟುಗಳಿದ್ದ ಅಳದಂಗಡಿಯಲ್ಲಿ ಇದೀಗ ನೂರಾರು ವಿವಿಧ ಮಾದರಿಯ ಅಂಗಡಿಗಳು ಪ್ರಾರಂಭಗೊಂಡು ಪೇಟೆಯು ವೇಗವಾಗಿ ಬೆಳೆಯುತ್ತಿದೆ.

ಪ್ರತೀಕ್ ಶೆಟ್ಟಿ ನೊಚ್ಚ ಇವರ ಮಾಲಕತ್ವದ “ನೊಚ್ಚ ಸೆರಾಮಿಕ್ಸ್” (ಪ್ರತಿಷ್ಟಿತ ಓರಿಯೆಂಟ್ ಬೆಲ್ ಟೈಲ್ಸ್‌ ನ ಅಧಿಕೃತ ಮಾರಾಟಗಾರರು) ಇದರ ಶುಭಾರಂಭವು ಅಳದಂಗಡಿ ಶ್ರೀ ಲಕ್ಷ್ಮೀ ಕಟ್ಟಡದಲ್ಲಿ ಜು.14 ರಂದು ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೂತನ ಸಂಸ್ಥೆಯ ಉದ್ಘಾಟನೆಯನ್ನು ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಪ್ರಗತಿಪರ ಕೃಷಿಕ ಎಮ್.ಗಂಗಾಧರ ಮಿತ್ತಮಾರ್,ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳಪುಳೆ, ಕಟ್ಟಡ ಮಾಲೀಕರಾದ ಡಾ.ಪ್ರಶಾಂತ್ ದೇವಾಡಿಗ, ಓರಿಯೆಂಟ್ ಬೆಲ್ ಟೈಲ್ಸ್ ಶಾಖಾ ಮುಖ್ಯಸ್ಥರಾದ ಶರೀಫ್ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಸಂಜೀವ ಪೂಜಾರಿ ಕೊಡಂಗೆ, ರಬ್ಬರ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ,ವಕೀಲರಾದ ಸಜಿತ್ ಕುಮಾರ್ ಜೈನ್,ಉದ್ಯಮಿ ಪುಷ್ಪರಾಜ್ ಶೆಟ್ಟಿ, ಸುಲ್ಕೇರಿ ಶ್ರೀರಾಮ ಶಾಲೆಯ ಮುಖ್ಯಸ್ಥರಾದ ರಾಜು, ಪ್ರಮುಖರಾದ ಶುಭಾಶ್ಚಂದ್ರ ರೈ ಪಡ್ಯೋಡಿ, ಚಂದ್ರಹಾಸ್ ಎಸ್.ಸಿ ಡಿ.ಸಿ‌.ಸಿ ಬ್ಯಾಂಕ್,ನವೀನ್ ಕೆ ಸಾಮಾನಿ ಕರಂಬಾರು, ಹೆಚ್.ಎಲ್ ರಾವ್,ಸಂಜೀವ ಶೆಟ್ಟಿ ಕುಂಠಿನಿ, ಜಯಂತ್ ಶೆಟ್ಟಿ ಕುಂಠಿನಿ, ಲ.ದೇವದಾಸ್ ಶೆಟ್ಟಿ ಹಿಬರೋಡಿ, ಕಿರಣ್ ಕುಮಾರ್ ಶೆಟ್ಟಿ ಗುರುವಾಯನಕೆರೆ, ನಿತ್ಯಾನಂದ ಎನ್ ನಾವರ, ವಿಜಯ್ ಕುಮಾರ್ ಜೈನ್, ಪ್ರದೀಪ್ ಶೆಟ್ಟಿ ಪಿಲ್ಯ,ಪ್ರಶಾಂತ್ ಶೆಟ್ಟಿ ಅಳದಂಗಡಿ, ಜಗನ್ನಾಥ ಶೆಟ್ಟಿ ಅಳದಂಗಡಿ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದು ಶುಭ ಕೋರಿದರು.

ಶ್ರೀಮತಿ ಮತ್ತು ನಿತ್ಯಾನಂದ ಶೆಟ್ಟಿ,ಪ್ರಕಾಶ್ ಶೆಟ್ಟಿ ನೊಚ್ಚ ಹಾಗೂ ಸಹೋದರರು, ಸಹೋದರಿಯರು ಮತ್ತು ಮಾಲಕ ಪ್ರತೀಕ್ ಶೆಟ್ಟಿ ನೊಚ್ಚ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!