September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡ ಪ್ರಕರಣ ಜು. 13ರಂದು ವರದಿಯಾಗಿದೆ.

ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವಾಹನ ಪರಿಶೀಲನೆ ನಡೆಸಿದಾಗ ಇದೆ ದಾರಿಯಾಗಿ ಮರಳು ತುಂಬಿದ ಒಂದು ಲಾರಿ ಹಾಗೂ ಪಿಕಪ್ ವಾಹನ ಬಂದಿದ್ದು ಪೊಲೀಸರನ್ನು ನೋಡಿ ಪಿಕಪ್ ಚಾಲಕ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಚಾಲಕ ಮಹಮ್ಮದ್ ನೌಫಾಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮರಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲದಿರುವುದು ಕಂಡು ಬಂದಿದೆ. ಅದೇ ರೀತಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಮರಳಿಗೂ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ ಈ ಹಿನ್ನಲೆಯಲ್ಲಿ ಕೆ.ಎ 18ಬಿ 9818 ನಂಬರ್ ನ ಈಚರ್ ಲಾರಿ ಹಾಗೂ ಕೆ.ಎ 21A 8861ವಂಬರ್ ನ ಪಿಕಪ್ ವಾಹನವನ್ನು ಹಾಗೂ ವಾಹನದಲ್ಲಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಎರಡು ವಾಹನಗಳ ಚಾಲಕರ ಹಾಗೂ ವಾಹನಗಳ ಮಾಲಕರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ
ಠಾಣೆ ಪ್ರಕರಣ ದಾಖಲಿಸಲಾಗಿದೆ

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya
error: Content is protected !!