23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ.


ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಯ ವಾಚನ-ಪ್ರವಚನ ನಡೆಯುತ್ತದೆ.
ಶನಿವಾರ ಮತ್ತು ಭಾನುವಾರಗಳಲ್ಲಿ ಕವಿ ರತ್ನಾಕರವರ್ಣಿಯ ಭರತೇಶವೈಭವ, ಮಂಕುತಿಮ್ಮನ ಕಗ್ಗ, ಶ್ರೀಮದ್ಭಾಗವತ, ಯಶೋಧರಚರಿತೆ, ತೊರವೆರಾಮಾಯಣ, ಮಹಾಭಾರತ, ಸೋಮೇಶ್ವರಶತಕ ಮೊದಲಾದ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.


ಜುಲೈ 16 ರಂದು ಬುಧವಾರ ಮತ್ತು 17 ರಂದು ಗುರುವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.


ಉದ್ಘಾಟನಾ ಸಮಾರಂಭ:
ಜುಲೈ 16 ರಂದು ಸಂಜೆ 5 ಗಂಟೆಗೆ ಯಕ್ಷಗಾನ ಬಯಲಾಟ ಅಕಾಡೆಮಿಯ “ಯಕ್ಷಸಿರಿ” ಪ್ರಶಸ್ತಿ ಪುರಸ್ಕೃತರಾದ ಹಾಗೂ ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಅವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

Related posts

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya
error: Content is protected !!