September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ.


ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಯ ವಾಚನ-ಪ್ರವಚನ ನಡೆಯುತ್ತದೆ.
ಶನಿವಾರ ಮತ್ತು ಭಾನುವಾರಗಳಲ್ಲಿ ಕವಿ ರತ್ನಾಕರವರ್ಣಿಯ ಭರತೇಶವೈಭವ, ಮಂಕುತಿಮ್ಮನ ಕಗ್ಗ, ಶ್ರೀಮದ್ಭಾಗವತ, ಯಶೋಧರಚರಿತೆ, ತೊರವೆರಾಮಾಯಣ, ಮಹಾಭಾರತ, ಸೋಮೇಶ್ವರಶತಕ ಮೊದಲಾದ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.


ಜುಲೈ 16 ರಂದು ಬುಧವಾರ ಮತ್ತು 17 ರಂದು ಗುರುವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.


ಉದ್ಘಾಟನಾ ಸಮಾರಂಭ:
ಜುಲೈ 16 ರಂದು ಸಂಜೆ 5 ಗಂಟೆಗೆ ಯಕ್ಷಗಾನ ಬಯಲಾಟ ಅಕಾಡೆಮಿಯ “ಯಕ್ಷಸಿರಿ” ಪ್ರಶಸ್ತಿ ಪುರಸ್ಕೃತರಾದ ಹಾಗೂ ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಅವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

Related posts

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya
error: Content is protected !!