23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

ಉಜಿರೆ: ಇಲ್ಲಿನ ಧೀಮತಿ ಜೈನ ಮಹಿಳಾ ಸಮಾಜ , ಬಾಹುಬಲಿ ಮಹಿಳಾ ಸಮಾಜ ಧರ್ಮಸ್ಥಳ ಇದರ ಜಂಟಿ ಆಶ್ರಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಪರಿಕಲ್ಪನೆ ಹಾಗೂ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಚೈತ್ಯಾಲಯದಲ್ಲಿ ಜಿನ ಮಂದಿರಕೆ ಹೋಗೋಣ ಬನ್ನಿ, ಜೈನ ಧರ್ಮದ ಸಾರವ ತಿಳಿಯೋಣ ಬನ್ನಿ ಎಂಬ ವಿನೂತನ ಧಾರ್ಮಿಕ ಸಂವಾದ ಕಾರ್ಯಕ್ರಮ ನಡೆಯಿತು.

ಜೈನ ಧರ್ಮದ ಮೂಲ ತತ್ವಗಳ ಕುರಿತಾದ ಧಾರ್ಮಿಕ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಧರ್ಮಸ್ಥಳದ ಜನಚೈತ್ಯಾಲಯದ ಪುರೋಹಿತ ಶಿಶಿರ್ ಕುಮಾರ್ ಇಂದ್ರ ಹಾಗೂ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಧಾರ್ಮಿಕ ಚಿಂತಕರಾದ ಡಾ.ಮಹಾವೀರ ಜೈನ್ ಇಚ್ಚಿಲಂಪಾಡಿ ಇವರು ಜೈನ ಧರ್ಮದ ಅಷ್ಟ ಮೂಲ ಗುಣಗಳು ಹಾಗೂ ಶ್ರಾವಕರ ಷಟ್ಕರ್ಮಗಳ ಬಗ್ಗೆ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಜೈನ ಧರ್ಮದ ಶಾಸ್ತ್ರಗಳಲ್ಲಿ ಉಲ್ಲೇಖಿಸಿರುವ ಧರ್ಮದ ಆಚರಣೆಯ ಸಾರವನ್ನು ಪರಿಚಯಿಸುತ್ತಾ ವೈಜ್ಞಾನಿಕ ಹಿನ್ನೆಲೆಯಿಂದ ಜೈನ ಧರ್ಮೀಯರು ಆಚರಿಸಿಕೊಂಡು ಬರುತ್ತಿರುವ ಆಚರಣೆಗಳು ಇಂದಿಗೂ ಹೆಚ್ಚು ಪ್ರಸ್ತುತ ಎಂದರು. ಕಿರಿಯರಲ್ಲಿ ಧರ್ಮದ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಜೈನ ಧರ್ಮದ ಸರಳ ಪರಿಚಯವನ್ನು ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಸುಪ್ರಿಯ ಹರ್ಷೇಂದ್ರ ಕುಮಾರ್ ಇವರು ಜೈನ ಧರ್ಮದ ಸರಳವಾದ ಪರಿಚಯ ಹಾಗೂ ಆಚರಣೆಯ ಪ್ರಾಮುಖ್ಯತೆಯನ್ನು ಇಂದಿನ ಎಳೆಯರು ಹಾಗೂ ಯುವ ಜನತೆಯಲ್ಲಿ ಮೂಡಿಸುವುದರ ಮೂಲಕ ಅಹಿಂಸಾತ್ಮಕ ದೃಷ್ಟಿಕೋನದ ಪ್ರಾಮುಖ್ಯತೆ ಹಾಗೂ ಧರ್ಮದ ಆಚರಣೆಯ ಪ್ರಸ್ತುತೆ ಯನ್ನು ಉಲ್ಲೇಖಿಸಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಹಂಪಿ ವಿಶ್ವವಿದ್ಯಾಲಯದಿಂದ ಪಿ ಹೆಚ್ ಡಿ ಪದವಿ ಪಡೆದ ಡಾ.ಮಹಾವೀರ ಜೈನ್ ಇವರನ್ನು ಧೀಮತಿ ಮಹಿಳಾ ಸಮಾಜ ದ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಧೀಮತಿ ಮಹಿಳಾ ಸಮಾಜದ ಅಧ್ಯಕ್ಷರಾದ ಡಾ. ರಜತ ಪಿ ಶೆಟ್ಟಿ ಸ್ವಾಗತಿಸಿ ಬಾಹುಬಲಿ ಮಹಿಳಾ ಸಮಾಜದ ಸದಸ್ಯೆ ಸಾವಿತ್ರಿ ವಂದಿಸಿದರು. ಶ್ರೀಮತಿ ಸೌಮ್ಯ ಸುಭಾಷ್ ಪ್ರಾರ್ಥಿಸಿ ದಿವ್ಯಕುಮಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya
error: Content is protected !!