25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

ಉಜಿರೆಯ ಶ್ರೀಮಾತಾ ಆರ್ಟ್ಸ್ ಕೇಂದ್ರದಲ್ಲಿ ಯಕ್ಷ ಭಾರತಿ ವತಿಯಿಂದ ನಡೆಯುತ್ತಿರುವ ಮಕ್ಕಳ ಯಕ್ಷಗಾನ ನಾಟ್ಯ ತರಬೇತಿಯಲ್ಲಿ ಮುಖವರ್ಣಿಕೆಯ ಶಿಬಿರವನ್ನು ನಡೆಸಲಾಯಿತು.

ಶಿಬಿರವನ್ನು ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ ಮತ್ತು ಹಿರಿಯ ಕಲಾವಿದ ಸುರೇಶ ಕುದ್ರೆಂತ್ತಾಯ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಗುರು ಪೂರ್ಣಿಮೆಯ ಪ್ರಯುಕ್ತ ನಾಟ್ಯ ಗುರು ಚಂದ್ರಶೇಖರ ಧರ್ಮಸ್ಥಳ ಇವರನ್ನು ಗುರುವಂದನೆಯಂಗವಾಗಿ ಯಕ್ಷ ಭಾರತಿ ಸಂಸ್ಥೆ ಮತ್ತು ಶಿಬಿರಾರ್ಥಿಗಳ ಪರವಾಗಿ ಸನ್ಮಾನಿಸಲಾಯಿತು.

ಚಂದ್ರಶೇಖರ ಧರ್ಮಸ್ಥಳ ಮುಖವರ್ಣಿಕೆಯ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ನೀಡಿದರು. ಶ್ರೀಮಾತಾ ಗುರುಪ್ರಸಾದ್ ಸಹಕರಿಸಿದರು.

ಯಕ್ಷ ಭಾರತಿ ಸಂಚಾಲಕ ಮಹೇಶ ಕನ್ಯಾಡಿ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya
error: Content is protected !!