25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

ಅಳದಂಗಡಿ: ಬೆಳೆಯುತ್ತಿರುವ ಅಳದಂಗಡಿ ಪ್ರದೇಶದಲ್ಲಿ ದಿನನಿತ್ಯ ವ್ಯಾಪರ ವಹಿವಾಟು ಬಹಳ ಜೋರಾಗಿ ನಡೆಯುತ್ತಿದೆ. ಕೆಲವೇ ಕೆಲವು ಅಂಗಡಿ ಮುಂಗಟ್ಟುಗಳಿದ್ದ ಅಳದಂಗಡಿಯಲ್ಲಿ ಇದೀಗ ನೂರಾರು ವಿವಿಧ ಮಾದರಿಯ ಅಂಗಡಿಗಳು ಪ್ರಾರಂಭಗೊಂಡು ಪೇಟೆಯು ವೇಗವಾಗಿ ಬೆಳೆಯುತ್ತಿದೆ.

ಪ್ರತೀಕ್ ಶೆಟ್ಟಿ ನೊಚ್ಚ ಇವರ ಮಾಲಕತ್ವದ “ನೊಚ್ಚ ಸೆರಾಮಿಕ್ಸ್” (ಪ್ರತಿಷ್ಟಿತ ಓರಿಯೆಂಟ್ ಬೆಲ್ ಟೈಲ್ಸ್‌ ನ ಅಧಿಕೃತ ಮಾರಾಟಗಾರರು) ಇದರ ಶುಭಾರಂಭವು ಅಳದಂಗಡಿ ಶ್ರೀ ಲಕ್ಷ್ಮೀ ಕಟ್ಟಡದಲ್ಲಿ ಜು.14 ರಂದು ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೂತನ ಸಂಸ್ಥೆಯ ಉದ್ಘಾಟನೆಯನ್ನು ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಪ್ರಗತಿಪರ ಕೃಷಿಕ ಎಮ್.ಗಂಗಾಧರ ಮಿತ್ತಮಾರ್,ಪ್ರಸಿದ್ಧ ವೈದ್ಯರಾದ ಡಾ.ಎನ್.ಎಮ್ ತುಳಪುಳೆ, ಕಟ್ಟಡ ಮಾಲೀಕರಾದ ಡಾ.ಪ್ರಶಾಂತ್ ದೇವಾಡಿಗ, ಓರಿಯೆಂಟ್ ಬೆಲ್ ಟೈಲ್ಸ್ ಶಾಖಾ ಮುಖ್ಯಸ್ಥರಾದ ಶರೀಫ್ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಸಂಜೀವ ಪೂಜಾರಿ ಕೊಡಂಗೆ, ರಬ್ಬರ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ,ವಕೀಲರಾದ ಸಜಿತ್ ಕುಮಾರ್ ಜೈನ್,ಉದ್ಯಮಿ ಪುಷ್ಪರಾಜ್ ಶೆಟ್ಟಿ, ಸುಲ್ಕೇರಿ ಶ್ರೀರಾಮ ಶಾಲೆಯ ಮುಖ್ಯಸ್ಥರಾದ ರಾಜು, ಪ್ರಮುಖರಾದ ಶುಭಾಶ್ಚಂದ್ರ ರೈ ಪಡ್ಯೋಡಿ, ಚಂದ್ರಹಾಸ್ ಎಸ್.ಸಿ ಡಿ.ಸಿ‌.ಸಿ ಬ್ಯಾಂಕ್,ನವೀನ್ ಕೆ ಸಾಮಾನಿ ಕರಂಬಾರು, ಹೆಚ್.ಎಲ್ ರಾವ್,ಸಂಜೀವ ಶೆಟ್ಟಿ ಕುಂಠಿನಿ, ಜಯಂತ್ ಶೆಟ್ಟಿ ಕುಂಠಿನಿ, ಲ.ದೇವದಾಸ್ ಶೆಟ್ಟಿ ಹಿಬರೋಡಿ, ಕಿರಣ್ ಕುಮಾರ್ ಶೆಟ್ಟಿ ಗುರುವಾಯನಕೆರೆ, ನಿತ್ಯಾನಂದ ಎನ್ ನಾವರ, ವಿಜಯ್ ಕುಮಾರ್ ಜೈನ್, ಪ್ರದೀಪ್ ಶೆಟ್ಟಿ ಪಿಲ್ಯ,ಪ್ರಶಾಂತ್ ಶೆಟ್ಟಿ ಅಳದಂಗಡಿ, ಜಗನ್ನಾಥ ಶೆಟ್ಟಿ ಅಳದಂಗಡಿ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದು ಶುಭ ಕೋರಿದರು.

ಶ್ರೀಮತಿ ಮತ್ತು ನಿತ್ಯಾನಂದ ಶೆಟ್ಟಿ,ಪ್ರಕಾಶ್ ಶೆಟ್ಟಿ ನೊಚ್ಚ ಹಾಗೂ ಸಹೋದರರು, ಸಹೋದರಿಯರು ಮತ್ತು ಮಾಲಕ ಪ್ರತೀಕ್ ಶೆಟ್ಟಿ ನೊಚ್ಚ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya
error: Content is protected !!