ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ಎ ಒಕ್ಕೂಟದ ಸಭೆಯು ಹರೀಶ್ ಸಾಲಿಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಒಕ್ಕೂಟದ ನಿರ್ವಹಣೆ ವರಮಹಾಲಕ್ಷ್ಮಿ ಪೂಜೆಯ ಬಗ್ಗೆ ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಹರೀಶ್ ತಿಳಿಸಿದರು. ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ ಒಕ್ಕೂಟದ ಒಗ್ಗಟ್ಟು ವರಮಹಾಲಕ್ಷ್ಮಿ ಪೂಜೆಯ ಪೂರ್ವ ತಯಾರಿ ಬಗ್ಗೆ ತಿಳಿಸಿದರು. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುರಕ್ಷ ಮತ್ತು ತಂಡ ಸ್ವಾಗತಿಸಿ, ನಿಕಟಪೂರ್ವ ಕಾರ್ಯದರ್ಶಿ ಶ್ರೀನಿವಾಸ್ ನಿರೂಪಿಸಿದರು.











