22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡ ಪ್ರಕರಣ ಜು. 13ರಂದು ವರದಿಯಾಗಿದೆ.

ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವಾಹನ ಪರಿಶೀಲನೆ ನಡೆಸಿದಾಗ ಇದೆ ದಾರಿಯಾಗಿ ಮರಳು ತುಂಬಿದ ಒಂದು ಲಾರಿ ಹಾಗೂ ಪಿಕಪ್ ವಾಹನ ಬಂದಿದ್ದು ಪೊಲೀಸರನ್ನು ನೋಡಿ ಪಿಕಪ್ ಚಾಲಕ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಚಾಲಕ ಮಹಮ್ಮದ್ ನೌಫಾಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮರಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲದಿರುವುದು ಕಂಡು ಬಂದಿದೆ. ಅದೇ ರೀತಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಮರಳಿಗೂ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ ಈ ಹಿನ್ನಲೆಯಲ್ಲಿ ಕೆ.ಎ 18ಬಿ 9818 ನಂಬರ್ ನ ಈಚರ್ ಲಾರಿ ಹಾಗೂ ಕೆ.ಎ 21A 8861ವಂಬರ್ ನ ಪಿಕಪ್ ವಾಹನವನ್ನು ಹಾಗೂ ವಾಹನದಲ್ಲಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಎರಡು ವಾಹನಗಳ ಚಾಲಕರ ಹಾಗೂ ವಾಹನಗಳ ಮಾಲಕರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ
ಠಾಣೆ ಪ್ರಕರಣ ದಾಖಲಿಸಲಾಗಿದೆ

Related posts

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
error: Content is protected !!