23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡ ಪ್ರಕರಣ ಜು. 13ರಂದು ವರದಿಯಾಗಿದೆ.

ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವಾಹನ ಪರಿಶೀಲನೆ ನಡೆಸಿದಾಗ ಇದೆ ದಾರಿಯಾಗಿ ಮರಳು ತುಂಬಿದ ಒಂದು ಲಾರಿ ಹಾಗೂ ಪಿಕಪ್ ವಾಹನ ಬಂದಿದ್ದು ಪೊಲೀಸರನ್ನು ನೋಡಿ ಪಿಕಪ್ ಚಾಲಕ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಚಾಲಕ ಮಹಮ್ಮದ್ ನೌಫಾಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮರಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲದಿರುವುದು ಕಂಡು ಬಂದಿದೆ. ಅದೇ ರೀತಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಮರಳಿಗೂ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ ಈ ಹಿನ್ನಲೆಯಲ್ಲಿ ಕೆ.ಎ 18ಬಿ 9818 ನಂಬರ್ ನ ಈಚರ್ ಲಾರಿ ಹಾಗೂ ಕೆ.ಎ 21A 8861ವಂಬರ್ ನ ಪಿಕಪ್ ವಾಹನವನ್ನು ಹಾಗೂ ವಾಹನದಲ್ಲಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಎರಡು ವಾಹನಗಳ ಚಾಲಕರ ಹಾಗೂ ವಾಹನಗಳ ಮಾಲಕರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ
ಠಾಣೆ ಪ್ರಕರಣ ದಾಖಲಿಸಲಾಗಿದೆ

Related posts

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ವೇಣೂರು : ಸುನಂದ ಪೂಜಾರಿ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya
error: Content is protected !!