22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಇಲ್ಲಿಯ ದೇವರಮಾರ್ ಶ್ರೀಮತಿ ಚಂಪಾವತಿ ಇವರ ಗದ್ದೆಯಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನೇತೃತ್ವದಲ್ಲಿ ಬೃ ಹತ್ ನೇಜಿ ನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡ ಬಲ್ಕಾಜೆ ಲಕ್ಷ್ಮಣ ಗೌಡ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನೇಜಿ ನಾಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ ಶ್ರೀಧರ್ ರಾವ್ ಕಾಯಡ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್, ಜೆಸಿಐ ಕಪಿಲಾ ಕೊಕ್ಕಡ ಇದರ ಶ್ರೀಮತಿ ಶೋಭಾ ಜೈನ್, ಸಂತೋಷ್ ಜೈನ್, ಜೋಸೆಫ್ ಪಿರೇರೊ, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಖಜಾಂಚಿ ನಿರಂಜನ ಬದಿಮಾರು, ಕೇಶವ ಗೌಡ ಮಲ್ಲಜಾಲ್, ಬಾಲಕೃಷ್ಣ ಗೌಡ ಬರಮೇಲು, ಉಮೇಶ್ ರೈ ಪಂಚಮಿಪಾದೆ, ಶೀನಪ್ಪ ಗೌಡ ಕೊತ್ತೋಡಿ, ಗಣೇಶ್ ಬದಿಮಾರ್, ರಾಘಚಂದ್ರ ಪೂಜಾರಿ, ವಸಂತ ಪೂಜಾರಿ ಶ್ರೀಮತಿ ಸುಜಾತ ಶೆಟ್ಟಿ, ಕಂಬಳ ಕೋಣ ಮಾಲಕರದ ಹರಿಪ್ರಸಾದ್ ಶೆಟ್ಟಿ ಹಾಗೂ ವಿವಿಧ ಸಂಘದ ಪದಾಧಿಕಾರಿಗಳು ಮತ್ತು ಊರ ಭಕ್ತರು ಉಪಸ್ಥಿತರಿದ್ದರು.
ಒಟ್ಟು 85 ಜನರು ನೇಜಿ ನಾಟಿ ಕೆಲಸದಲ್ಲಿ ಪಾಲ್ಗೊಂಡಿದ್ದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya
error: Content is protected !!