25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಇಲ್ಲಿಯ ದೇವರಮಾರ್ ಶ್ರೀಮತಿ ಚಂಪಾವತಿ ಇವರ ಗದ್ದೆಯಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನೇತೃತ್ವದಲ್ಲಿ ಬೃ ಹತ್ ನೇಜಿ ನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮದ ಹಿರಿಯ ಮುಖಂಡ ಬಲ್ಕಾಜೆ ಲಕ್ಷ್ಮಣ ಗೌಡ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನೇಜಿ ನಾಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ ಶ್ರೀಧರ್ ರಾವ್ ಕಾಯಡ, ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್, ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್, ಜೆಸಿಐ ಕಪಿಲಾ ಕೊಕ್ಕಡ ಇದರ ಶ್ರೀಮತಿ ಶೋಭಾ ಜೈನ್, ಸಂತೋಷ್ ಜೈನ್, ಜೋಸೆಫ್ ಪಿರೇರೊ, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಖಜಾಂಚಿ ನಿರಂಜನ ಬದಿಮಾರು, ಕೇಶವ ಗೌಡ ಮಲ್ಲಜಾಲ್, ಬಾಲಕೃಷ್ಣ ಗೌಡ ಬರಮೇಲು, ಉಮೇಶ್ ರೈ ಪಂಚಮಿಪಾದೆ, ಶೀನಪ್ಪ ಗೌಡ ಕೊತ್ತೋಡಿ, ಗಣೇಶ್ ಬದಿಮಾರ್, ರಾಘಚಂದ್ರ ಪೂಜಾರಿ, ವಸಂತ ಪೂಜಾರಿ ಶ್ರೀಮತಿ ಸುಜಾತ ಶೆಟ್ಟಿ, ಕಂಬಳ ಕೋಣ ಮಾಲಕರದ ಹರಿಪ್ರಸಾದ್ ಶೆಟ್ಟಿ ಹಾಗೂ ವಿವಿಧ ಸಂಘದ ಪದಾಧಿಕಾರಿಗಳು ಮತ್ತು ಊರ ಭಕ್ತರು ಉಪಸ್ಥಿತರಿದ್ದರು.
ಒಟ್ಟು 85 ಜನರು ನೇಜಿ ನಾಟಿ ಕೆಲಸದಲ್ಲಿ ಪಾಲ್ಗೊಂಡಿದ್ದರು.

Related posts

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!