22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ.


ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಯ ವಾಚನ-ಪ್ರವಚನ ನಡೆಯುತ್ತದೆ.
ಶನಿವಾರ ಮತ್ತು ಭಾನುವಾರಗಳಲ್ಲಿ ಕವಿ ರತ್ನಾಕರವರ್ಣಿಯ ಭರತೇಶವೈಭವ, ಮಂಕುತಿಮ್ಮನ ಕಗ್ಗ, ಶ್ರೀಮದ್ಭಾಗವತ, ಯಶೋಧರಚರಿತೆ, ತೊರವೆರಾಮಾಯಣ, ಮಹಾಭಾರತ, ಸೋಮೇಶ್ವರಶತಕ ಮೊದಲಾದ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.


ಜುಲೈ 16 ರಂದು ಬುಧವಾರ ಮತ್ತು 17 ರಂದು ಗುರುವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.


ಉದ್ಘಾಟನಾ ಸಮಾರಂಭ:
ಜುಲೈ 16 ರಂದು ಸಂಜೆ 5 ಗಂಟೆಗೆ ಯಕ್ಷಗಾನ ಬಯಲಾಟ ಅಕಾಡೆಮಿಯ “ಯಕ್ಷಸಿರಿ” ಪ್ರಶಸ್ತಿ ಪುರಸ್ಕೃತರಾದ ಹಾಗೂ ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಅವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

Related posts

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಶಿವಾನಿ ಪಿ ಶೆಟ್ಟಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya
error: Content is protected !!