25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ.


ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಯ ವಾಚನ-ಪ್ರವಚನ ನಡೆಯುತ್ತದೆ.
ಶನಿವಾರ ಮತ್ತು ಭಾನುವಾರಗಳಲ್ಲಿ ಕವಿ ರತ್ನಾಕರವರ್ಣಿಯ ಭರತೇಶವೈಭವ, ಮಂಕುತಿಮ್ಮನ ಕಗ್ಗ, ಶ್ರೀಮದ್ಭಾಗವತ, ಯಶೋಧರಚರಿತೆ, ತೊರವೆರಾಮಾಯಣ, ಮಹಾಭಾರತ, ಸೋಮೇಶ್ವರಶತಕ ಮೊದಲಾದ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.


ಜುಲೈ 16 ರಂದು ಬುಧವಾರ ಮತ್ತು 17 ರಂದು ಗುರುವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.


ಉದ್ಘಾಟನಾ ಸಮಾರಂಭ:
ಜುಲೈ 16 ರಂದು ಸಂಜೆ 5 ಗಂಟೆಗೆ ಯಕ್ಷಗಾನ ಬಯಲಾಟ ಅಕಾಡೆಮಿಯ “ಯಕ್ಷಸಿರಿ” ಪ್ರಶಸ್ತಿ ಪುರಸ್ಕೃತರಾದ ಹಾಗೂ ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಅವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

Related posts

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya
error: Content is protected !!