September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮತ್ತೊಂದು ಪತ್ರವನ್ನು ದಕ್ಷಿಣ ಕನ್ನಡ ಪೊಲೀಸ್ ಅಧೀಕ್ಷಕರಿಗೆ ಬರೆಯಲಾಗಿದ್ದು ಅದರಲ್ಲಿ 20 ವರ್ಷಗಳಲ್ಲಿ ಎಷ್ಟು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅದರಲ್ಲಿ ಎಷ್ಟು ಜನರ ಪತ್ತೆ ಮಾಡಲಾಗಿದೆ.ಪತ್ತೆ ಮಾಡಲಾಗದ ಪ್ರಕರಣಗಳು ಎಷ್ಟು? ಅಸ್ವಾಭಾವಿಕವಾಸ ಸಾವು/ಕೊಲೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮ ವಿವರವನ್ನು ಈ ಪತ್ರ ತಲುಪಿದ 7 ದಿನದೊಳಗೆ ಆಯೋಗಕ್ಕೆ ವರದಿಯನ್ನು ಕಳುಹಿಸುವಂತೆ ಜುಲೈ 14 ರಂದು ಕಳುಹಿಸಿದ ಪತ್ರದಲ್ಲಿ ತಿಳಿಸಲಾಗಿದೆ.

Related posts

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!