23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ

ಪುದುವೆಟ್ಟು : ಇಲ್ಲಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾಷಾ ಮತ್ತು ಸಾಹಿತ್ಯ ಸಂಘದ ವತಿಯಿಂದ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ ನಡೆಯಿತು .

ಸ್ಥಳೀಯ ನಾಟಿ ವೈದರು ಹಾಗೂ ಪ್ರಗತಿಪರ ಕೃಷಿಕ ನಾರಾಯಣ ಗೌಡ ಮುಚ್ಚಾರು ಇವರು ಭಾಗವಹಿಸಿ ವಿಧ್ಯಾರ್ಥಿಗಳಿಗೆ ವಿವಿಧ ನಾಟಿ ಮದ್ದಿನ ಗಿಡಗಳ ಮಹತ್ವದ ಬಗ್ಗೆ ಗಿಡಮೂಲಿಕೆಗಳಗಳನ್ನು ತೋರಿಸಿ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಶೀನಪ್ಪ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸ್ತುತ ಕಾಲ ಘಟ್ಟ ದಲ್ಲಿ ನಾಟಿ ಮದ್ದುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಇರಬೇಕು ಕೆಲವೊಂದು ಸಂದರ್ಭದಲ್ಲಿ ಹಳ್ಳಿ ಮದ್ದುಗಳ ಬಳಕೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಟ್ಟರು. ಪವನ್ ಕುಮಾರ್ ಸ್ವಾಗತಿಸಿದರು. ಶ್ರೀಮತಿ ಯಶೋಧ.ಕೆ ಧನ್ಯವಾದವಿತ್ತರು. ಕು| ಜಿತೀಕ್ಷ ನಿರೂಪಿಸಿದರು.

Related posts

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya
error: Content is protected !!