ಮಿತ್ತಬಾಗಿಲು: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ,ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಯಲ್ಲಿ ಜು.13 ರಂದು ಜರಗಿತು.


ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಮಧುಕರ್ ಪ್ರಭು, ಶ್ರೀಮತಿ ತುಳಸಿ, ಶ್ರೀಮತಿ ಸುಜಾತ ಉಪಸ್ಥಿತರಿದ್ದರು. ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಗೌಡ ಕುಕ್ಕಾವು ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಗೋಪಾಲ್ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿಯಸದಸ್ಯರು, ಶಾಲಾ ಶಿಕ್ಷಕರು , ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರು,ಅಡುಗೆ ಸಿಬ್ಬಂದಿಯವರುಹಾಜರಿದ್ದರು











