22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

ಉಜಿರೆಯ ಶ್ರೀಮಾತಾ ಆರ್ಟ್ಸ್ ಕೇಂದ್ರದಲ್ಲಿ ಯಕ್ಷ ಭಾರತಿ ವತಿಯಿಂದ ನಡೆಯುತ್ತಿರುವ ಮಕ್ಕಳ ಯಕ್ಷಗಾನ ನಾಟ್ಯ ತರಬೇತಿಯಲ್ಲಿ ಮುಖವರ್ಣಿಕೆಯ ಶಿಬಿರವನ್ನು ನಡೆಸಲಾಯಿತು.

ಶಿಬಿರವನ್ನು ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ ಮತ್ತು ಹಿರಿಯ ಕಲಾವಿದ ಸುರೇಶ ಕುದ್ರೆಂತ್ತಾಯ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಗುರು ಪೂರ್ಣಿಮೆಯ ಪ್ರಯುಕ್ತ ನಾಟ್ಯ ಗುರು ಚಂದ್ರಶೇಖರ ಧರ್ಮಸ್ಥಳ ಇವರನ್ನು ಗುರುವಂದನೆಯಂಗವಾಗಿ ಯಕ್ಷ ಭಾರತಿ ಸಂಸ್ಥೆ ಮತ್ತು ಶಿಬಿರಾರ್ಥಿಗಳ ಪರವಾಗಿ ಸನ್ಮಾನಿಸಲಾಯಿತು.

ಚಂದ್ರಶೇಖರ ಧರ್ಮಸ್ಥಳ ಮುಖವರ್ಣಿಕೆಯ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ನೀಡಿದರು. ಶ್ರೀಮಾತಾ ಗುರುಪ್ರಸಾದ್ ಸಹಕರಿಸಿದರು.

ಯಕ್ಷ ಭಾರತಿ ಸಂಚಾಲಕ ಮಹೇಶ ಕನ್ಯಾಡಿ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya
error: Content is protected !!