September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

ಉಜಿರೆಯ ಶ್ರೀಮಾತಾ ಆರ್ಟ್ಸ್ ಕೇಂದ್ರದಲ್ಲಿ ಯಕ್ಷ ಭಾರತಿ ವತಿಯಿಂದ ನಡೆಯುತ್ತಿರುವ ಮಕ್ಕಳ ಯಕ್ಷಗಾನ ನಾಟ್ಯ ತರಬೇತಿಯಲ್ಲಿ ಮುಖವರ್ಣಿಕೆಯ ಶಿಬಿರವನ್ನು ನಡೆಸಲಾಯಿತು.

ಶಿಬಿರವನ್ನು ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ ಮತ್ತು ಹಿರಿಯ ಕಲಾವಿದ ಸುರೇಶ ಕುದ್ರೆಂತ್ತಾಯ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಗುರು ಪೂರ್ಣಿಮೆಯ ಪ್ರಯುಕ್ತ ನಾಟ್ಯ ಗುರು ಚಂದ್ರಶೇಖರ ಧರ್ಮಸ್ಥಳ ಇವರನ್ನು ಗುರುವಂದನೆಯಂಗವಾಗಿ ಯಕ್ಷ ಭಾರತಿ ಸಂಸ್ಥೆ ಮತ್ತು ಶಿಬಿರಾರ್ಥಿಗಳ ಪರವಾಗಿ ಸನ್ಮಾನಿಸಲಾಯಿತು.

ಚಂದ್ರಶೇಖರ ಧರ್ಮಸ್ಥಳ ಮುಖವರ್ಣಿಕೆಯ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ನೀಡಿದರು. ಶ್ರೀಮಾತಾ ಗುರುಪ್ರಸಾದ್ ಸಹಕರಿಸಿದರು.

ಯಕ್ಷ ಭಾರತಿ ಸಂಚಾಲಕ ಮಹೇಶ ಕನ್ಯಾಡಿ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya
error: Content is protected !!