22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡ ಪ್ರಕರಣ ಜು. 13ರಂದು ವರದಿಯಾಗಿದೆ.

ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವಾಹನ ಪರಿಶೀಲನೆ ನಡೆಸಿದಾಗ ಇದೆ ದಾರಿಯಾಗಿ ಮರಳು ತುಂಬಿದ ಒಂದು ಲಾರಿ ಹಾಗೂ ಪಿಕಪ್ ವಾಹನ ಬಂದಿದ್ದು ಪೊಲೀಸರನ್ನು ನೋಡಿ ಪಿಕಪ್ ಚಾಲಕ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಚಾಲಕ ಮಹಮ್ಮದ್ ನೌಫಾಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮರಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲದಿರುವುದು ಕಂಡು ಬಂದಿದೆ. ಅದೇ ರೀತಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಮರಳಿಗೂ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ ಈ ಹಿನ್ನಲೆಯಲ್ಲಿ ಕೆ.ಎ 18ಬಿ 9818 ನಂಬರ್ ನ ಈಚರ್ ಲಾರಿ ಹಾಗೂ ಕೆ.ಎ 21A 8861ವಂಬರ್ ನ ಪಿಕಪ್ ವಾಹನವನ್ನು ಹಾಗೂ ವಾಹನದಲ್ಲಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಎರಡು ವಾಹನಗಳ ಚಾಲಕರ ಹಾಗೂ ವಾಹನಗಳ ಮಾಲಕರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ
ಠಾಣೆ ಪ್ರಕರಣ ದಾಖಲಿಸಲಾಗಿದೆ

Related posts

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮಸಭೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya
error: Content is protected !!