23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆಯ ಪೂರ್ವಭಾವಿಯಾಗಿ ಕಳಿಯ ಗ್ರಾಮದ ಪ್ರಥಮ ಮತ್ತು ದ್ವಿತೀಯ ವಾರ್ಡ್ ನ ಪ್ರಥಮ ಸುತ್ತಿನ ವಾರ್ಡ್ ಸಭೆಯು ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ಜರಗಿತು.

ಗ್ರಾಮಸ್ಥರು ವಿವಿಧ ಅಭಿವೃದ್ದಿ ವಿಷಯದ ಬಗ್ಗೆ ಚರ್ಚಿಸಿದರು. ಸತೀಶ್ ಭಂಡಾರಿ ನಾಳರವರು ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಹಾಕುವುದು ಹೊರಗಡೆಯಿಂದ ತ್ಯಾಜ್ಯ ತಂದು ಹಾಕುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮವಹಿಸಿ ದಂಡ ವಿಧಿಸುವುದು ಮತ್ತು ಸಿ ಸಿ ಟಿವಿ ಅಳವಡಿಸುವಂತೆ ತಿಳಿಸಿದರು.


ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಶ್ರೀಮತಿ ಸುಭಾಷಿಣಿ ಕೆ, ಅಬ್ದುಲ್ ಕರೀಮ್’, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ಉಮೇಶ್ ಗೋವಿಂದೂರು, ಕುಂಟಿನಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಜಾತ, ಸಿಬ್ಬಂದಿಗಳಾದ ರವಿ ಎಚ್.,ಸುರೇಶ್ ಗೌಡ ಗ್ರಾಮಸ್ಥರು ಹಾಜರಿದ್ದರು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya
error: Content is protected !!