July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆಯ ಪೂರ್ವಭಾವಿಯಾಗಿ ಕಳಿಯ ಗ್ರಾಮದ ಪ್ರಥಮ ಮತ್ತು ದ್ವಿತೀಯ ವಾರ್ಡ್ ನ ಪ್ರಥಮ ಸುತ್ತಿನ ವಾರ್ಡ್ ಸಭೆಯು ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ಜರಗಿತು.

ಗ್ರಾಮಸ್ಥರು ವಿವಿಧ ಅಭಿವೃದ್ದಿ ವಿಷಯದ ಬಗ್ಗೆ ಚರ್ಚಿಸಿದರು. ಸತೀಶ್ ಭಂಡಾರಿ ನಾಳರವರು ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಹಾಕುವುದು ಹೊರಗಡೆಯಿಂದ ತ್ಯಾಜ್ಯ ತಂದು ಹಾಕುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮವಹಿಸಿ ದಂಡ ವಿಧಿಸುವುದು ಮತ್ತು ಸಿ ಸಿ ಟಿವಿ ಅಳವಡಿಸುವಂತೆ ತಿಳಿಸಿದರು.


ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಶ್ರೀಮತಿ ಸುಭಾಷಿಣಿ ಕೆ, ಅಬ್ದುಲ್ ಕರೀಮ್’, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ಉಮೇಶ್ ಗೋವಿಂದೂರು, ಕುಂಟಿನಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಜಾತ, ಸಿಬ್ಬಂದಿಗಳಾದ ರವಿ ಎಚ್.,ಸುರೇಶ್ ಗೌಡ ಗ್ರಾಮಸ್ಥರು ಹಾಜರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya
error: Content is protected !!