July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

ಉಜಿರೆ: ಇಲ್ಲಿನ ಧೀಮತಿ ಜೈನ ಮಹಿಳಾ ಸಮಾಜ , ಬಾಹುಬಲಿ ಮಹಿಳಾ ಸಮಾಜ ಧರ್ಮಸ್ಥಳ ಇದರ ಜಂಟಿ ಆಶ್ರಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಪರಿಕಲ್ಪನೆ ಹಾಗೂ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಚೈತ್ಯಾಲಯದಲ್ಲಿ ಜಿನ ಮಂದಿರಕೆ ಹೋಗೋಣ ಬನ್ನಿ, ಜೈನ ಧರ್ಮದ ಸಾರವ ತಿಳಿಯೋಣ ಬನ್ನಿ ಎಂಬ ವಿನೂತನ ಧಾರ್ಮಿಕ ಸಂವಾದ ಕಾರ್ಯಕ್ರಮ ನಡೆಯಿತು.

ಜೈನ ಧರ್ಮದ ಮೂಲ ತತ್ವಗಳ ಕುರಿತಾದ ಧಾರ್ಮಿಕ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಧರ್ಮಸ್ಥಳದ ಜನಚೈತ್ಯಾಲಯದ ಪುರೋಹಿತ ಶಿಶಿರ್ ಕುಮಾರ್ ಇಂದ್ರ ಹಾಗೂ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಧಾರ್ಮಿಕ ಚಿಂತಕರಾದ ಡಾ.ಮಹಾವೀರ ಜೈನ್ ಇಚ್ಚಿಲಂಪಾಡಿ ಇವರು ಜೈನ ಧರ್ಮದ ಅಷ್ಟ ಮೂಲ ಗುಣಗಳು ಹಾಗೂ ಶ್ರಾವಕರ ಷಟ್ಕರ್ಮಗಳ ಬಗ್ಗೆ ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಜೈನ ಧರ್ಮದ ಶಾಸ್ತ್ರಗಳಲ್ಲಿ ಉಲ್ಲೇಖಿಸಿರುವ ಧರ್ಮದ ಆಚರಣೆಯ ಸಾರವನ್ನು ಪರಿಚಯಿಸುತ್ತಾ ವೈಜ್ಞಾನಿಕ ಹಿನ್ನೆಲೆಯಿಂದ ಜೈನ ಧರ್ಮೀಯರು ಆಚರಿಸಿಕೊಂಡು ಬರುತ್ತಿರುವ ಆಚರಣೆಗಳು ಇಂದಿಗೂ ಹೆಚ್ಚು ಪ್ರಸ್ತುತ ಎಂದರು. ಕಿರಿಯರಲ್ಲಿ ಧರ್ಮದ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಜೈನ ಧರ್ಮದ ಸರಳ ಪರಿಚಯವನ್ನು ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಸುಪ್ರಿಯ ಹರ್ಷೇಂದ್ರ ಕುಮಾರ್ ಇವರು ಜೈನ ಧರ್ಮದ ಸರಳವಾದ ಪರಿಚಯ ಹಾಗೂ ಆಚರಣೆಯ ಪ್ರಾಮುಖ್ಯತೆಯನ್ನು ಇಂದಿನ ಎಳೆಯರು ಹಾಗೂ ಯುವ ಜನತೆಯಲ್ಲಿ ಮೂಡಿಸುವುದರ ಮೂಲಕ ಅಹಿಂಸಾತ್ಮಕ ದೃಷ್ಟಿಕೋನದ ಪ್ರಾಮುಖ್ಯತೆ ಹಾಗೂ ಧರ್ಮದ ಆಚರಣೆಯ ಪ್ರಸ್ತುತೆ ಯನ್ನು ಉಲ್ಲೇಖಿಸಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಹಂಪಿ ವಿಶ್ವವಿದ್ಯಾಲಯದಿಂದ ಪಿ ಹೆಚ್ ಡಿ ಪದವಿ ಪಡೆದ ಡಾ.ಮಹಾವೀರ ಜೈನ್ ಇವರನ್ನು ಧೀಮತಿ ಮಹಿಳಾ ಸಮಾಜ ದ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಧೀಮತಿ ಮಹಿಳಾ ಸಮಾಜದ ಅಧ್ಯಕ್ಷರಾದ ಡಾ. ರಜತ ಪಿ ಶೆಟ್ಟಿ ಸ್ವಾಗತಿಸಿ ಬಾಹುಬಲಿ ಮಹಿಳಾ ಸಮಾಜದ ಸದಸ್ಯೆ ಸಾವಿತ್ರಿ ವಂದಿಸಿದರು. ಶ್ರೀಮತಿ ಸೌಮ್ಯ ಸುಭಾಷ್ ಪ್ರಾರ್ಥಿಸಿ ದಿವ್ಯಕುಮಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya
error: Content is protected !!