23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

ಉಜಿರೆಯ ಶ್ರೀಮಾತಾ ಆರ್ಟ್ಸ್ ಕೇಂದ್ರದಲ್ಲಿ ಯಕ್ಷ ಭಾರತಿ ವತಿಯಿಂದ ನಡೆಯುತ್ತಿರುವ ಮಕ್ಕಳ ಯಕ್ಷಗಾನ ನಾಟ್ಯ ತರಬೇತಿಯಲ್ಲಿ ಮುಖವರ್ಣಿಕೆಯ ಶಿಬಿರವನ್ನು ನಡೆಸಲಾಯಿತು.

ಶಿಬಿರವನ್ನು ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ ಮತ್ತು ಹಿರಿಯ ಕಲಾವಿದ ಸುರೇಶ ಕುದ್ರೆಂತ್ತಾಯ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಗುರು ಪೂರ್ಣಿಮೆಯ ಪ್ರಯುಕ್ತ ನಾಟ್ಯ ಗುರು ಚಂದ್ರಶೇಖರ ಧರ್ಮಸ್ಥಳ ಇವರನ್ನು ಗುರುವಂದನೆಯಂಗವಾಗಿ ಯಕ್ಷ ಭಾರತಿ ಸಂಸ್ಥೆ ಮತ್ತು ಶಿಬಿರಾರ್ಥಿಗಳ ಪರವಾಗಿ ಸನ್ಮಾನಿಸಲಾಯಿತು.

ಚಂದ್ರಶೇಖರ ಧರ್ಮಸ್ಥಳ ಮುಖವರ್ಣಿಕೆಯ ಹಂತಗಳನ್ನು ವಿವರಿಸಿ ಪ್ರಾತ್ಯಕ್ಷಿಕೆಯನ್ನು ನೀಡಿದರು. ಶ್ರೀಮಾತಾ ಗುರುಪ್ರಸಾದ್ ಸಹಕರಿಸಿದರು.

ಯಕ್ಷ ಭಾರತಿ ಸಂಚಾಲಕ ಮಹೇಶ ಕನ್ಯಾಡಿ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya
error: Content is protected !!