25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

ಲಾಯಿಲ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನದ ಶಿಕ್ಷಣ ಅತಿ ಮೌಲ್ಯವುಳ್ಳದ್ದು. ಬರೀ ಓದಿದರೆ ಸಾಲದು ಇಂದು ವಿದ್ಯಾರ್ಥಿಗಳು ತುಂಬಾ ಪ್ರಯತ್ನವನ್ನು ಮಾಡಬೇಕು. ಹಾಗೆಯೇ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಒಳ್ಳೆಯ ವಿದ್ಯೆ ಇದ್ದರೆ; ಉದ್ಯೋಗದ ಜೊತೆಗೆ ಭವಿಷ್ಯ ಉತ್ತಮವಾಗಿರುತ್ತದೆ. ಉದ್ಯೋಗ ನಮಗೆ ಗೌರವ ತಂದು ಕೊಡುತ್ತದೆ. ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಲಾಯಿಲ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿ-ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಕೃಷ್ಣ ಟಿ. ಇವರು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ರಮೇಶ್ ಉಪಸ್ಥಿತರಿದ್ದು, ಕಂಪ್ಯೂಟರ್ ಶಿಕ್ಷಣವು ಮುಂದಿನ ನಿಮ್ಮ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ತುಂಬಾ ಸಹಾಯವಾಗಲಿದೆ. ಎಲ್ಲಾ ವಿದ್ಯಾರ್ಥಿಗಳ ಕನಸು ನನಸಾಗಲಿ ಎಂದರು.
ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 37 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 10 ಮಂದಿ ಉನ್ನತ ಶ್ರೇಣಿ ಹಾಗೂ 26 ವಿದ್ಯಾರ್ಥಿಗಳು ʼಎʼ ಗ್ರೇಡ್ ನಲ್ಲಿ ಉತ್ತೀರ್ಣರಾಗಿ ಶೇ. 100 ಫಲಿತಾಂಶ ಬಂದಿದೆ.


ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರು ಜಯಶ್ರೀ ನಿರ್ವಹಣೆ ಮಾಡಿ, ಧನ್ಯವಾದ ನೀಡಿದರು.

Related posts

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya
error: Content is protected !!