25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

ಅಳದಂಗಡಿ: ಸುಲ್ಕೇರಿಮೊಗ್ರು ಗ್ರಾಮದ ಅದ್ಭುತ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ (50 ವ) ಅವರು ಅಸೌಖ್ಯದಿಂದ ಜು. 15 ರಂದು ಬೆಳ್ತಂಗಡಿಯ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ದೇವಸ್ಥಾನ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ಹಾಗೂ ನಾದಸ್ವರದ ಮೂಲಕ ಚಿರಪರಿಚಿತರಾಗಿದ್ದ ಗಣೇಶ್ ಪೂಜಾರಿಯವರಿಗೆ ಕಳೆದ ಏಳೆಂಟು ತಿಂಗಳ ಹಿಂದೆ ಅನಾರೋಗ್ಯ ಕಾಡಿತ್ತು. ಹಲವು ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ತೀವ್ರವಾಗಿ ಬಾಧಿಸಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದರು.ಇದೀಗ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಸಮಾಜದಲ್ಲಿ ಇವರನ್ನು ಬ್ಯಾಂಡ್ ಗಣೇಶ್ ಪೂಜಾರಿ ಎಂದು ಕರೆಯಲಾಗುತ್ತಿತ್ತು.ಎಲ್ಲರೊಂದಿಗೂ ನಗು ಮೊಗದಿಂದ ಇರುತ್ತಿದ್ದರು.

ಮೃತರು ಪತ್ನಿ ಚಂದ್ರಾವತಿ, ಒರ್ವ ಪುತ್ರ ಶೈಲೇಶ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಹುಟ್ಟೂರು ತ್ಯಜಿಸಿ ಹೋಗಿದ್ದವನಿಗೆ ಮತ್ತೆ ಮರುಕಳಿಸಿದ ಬಾಲ್ಯದ ನೆನಪು..! 26 ವರ್ಷದ ಬಳಿಕ ಒಂದಾದ ಕರುಳ ಕುಡಿ….

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya
error: Content is protected !!