September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

ಕಕ್ಕಿಂಜೆ: ಮಂಗಳೂರಿನ (ಕೆಎಂಸಿ) ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವುದರ ಬಗ್ಗೆ ಚರ್ಚಿಸಿದರು.

ಕೆಎಂಸಿ ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗವು(Department of Community Medicine) ಮತ್ತು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯೊಂದಿಗೆ ಹೊಸ ಒಡಂಬಡಿಕೆಯನ್ನು ಮಾಡಿಕೊಂಡಿದೆ. ಈ ಒಡಂಬಡಿಕೆಯು ಕೆಎಂಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞವೈದ್ಯರ ಲಭ್ಯತೆ, ಉತ್ತಮ ವೈದ್ಯಕೀಯ ಸೇವೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ವಿಸ್ತರಿಸಲು, ಗುಣಮಟ್ಟದ ಆರೋಗ್ಯ ಸೇವೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ ಮತ್ತು ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ತಜ್ಞವೈದ್ಯರು ಪ್ರತಿದಿನ ಸಂದರ್ಶನಕ್ಕೆ ಲಭ್ಯರಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೆಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ಕೆಎಂಸಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನ ಮಿತ್ರ, ಸಮುದಾಯ ವೈದ್ಯಕೀಯ ವಿಭಾಗದ ಪ್ರೊಫೆಸರ್ ಗಳಾದ ಡಾ.ಮಿಥುನ್ ಹಾಗೂ ಡಾ.ಅಜಿತ್, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಮುಖ್ಯ ವೈದ್ಯಾಧಿಕಾರಿ ಡಾ.ಅಲ್ಬೀನ್ ಜೋಸೆಫ್, ವೈದ್ಯಾಧಿಕಾರಿ ಡಾ.ಮೌಲ್ಯ ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya
error: Content is protected !!