July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಳೆಂಜ: ಜು.14ರಂದು ನಾಪತ್ತೆಯಾಗಿದ್ದ ಕಳೆಂಜ ಗ್ರಾಮದ ರೆಂಜದಡಿ ಮನೆ ನಿವಾಸಿ ಜಿನ್ನಪ್ಪ ಗೌಡ(76) ರವರ ಶವ ಜು.15ರಂದು ಪತ್ತೆಯಾಗಿದೆ.

ಜು.14ರಂದು ಕಾಣೆಯಾಗಿದ್ದ ಜಿನ್ನಪ್ಪ ಗೌಡ ಅವರ ಪತ್ತೆಗಾಗಿ ಅವರ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಆದರೂ ಪತ್ತೆ ಆಗಿರಲಿಲ್ಲ. ಇಂದು ಮುಂಜಾನೆ ಮತ್ತೆ ಸ್ಥಳೀಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಕಾಯರ್ತಡ್ಕದಿಂದ ಅಮ್ಮಿನಡ್ಕ ಕಡೆಗೆ ಬಂದಿರುವುದು ತಿಳಿದು ಬಂದಿರುವುದರಿಂದ ಮನೆಯವರು ಮತ್ತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮಧ್ಯಾಹ್ನ ನಂತರ ಅರಸಿನಮಕ್ಕಿ- ಶಿಶಿಲ ಶೌರ್ಯ ವಿಪತ್ತು ತಂಡದ ಸದಸ್ಯರೊಂದಿಗೆ ಕುದ್ದ ಸಮೀಪ ಇರುವ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಶವವಾಗಿ ಪತ್ತೆಯಾಗಿದೆ.

ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಊಹೆ ಮಾಡಿಕೊಳ್ಳುತ್ತಿದ್ದು ನೈಜ ಕಾರಣ ಇನ್ನಷ್ಟೇ ತನಿಖೆಯ ಮೂಲಕ ತಿಳಿಯಬೇಕಿದೆ.ಮೃತರು ಪುತ್ರ ಶಿವರಾಂ, ಪುತ್ರಿಯರಾದ ವೇದಾವತಿ, ಕುಸುಮ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಕರಂಬಾರು ಶಾಲಾ ಬಳಿ ನಿವಾಸಿ ರಮೇಶ ದೇವಧರ್ ನಿಧನ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya
error: Content is protected !!