23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಳೆಂಜ: ಜು.14ರಂದು ನಾಪತ್ತೆಯಾಗಿದ್ದ ಕಳೆಂಜ ಗ್ರಾಮದ ರೆಂಜದಡಿ ಮನೆ ನಿವಾಸಿ ಜಿನ್ನಪ್ಪ ಗೌಡ(76) ರವರ ಶವ ಜು.15ರಂದು ಪತ್ತೆಯಾಗಿದೆ.

ಜು.14ರಂದು ಕಾಣೆಯಾಗಿದ್ದ ಜಿನ್ನಪ್ಪ ಗೌಡ ಅವರ ಪತ್ತೆಗಾಗಿ ಅವರ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಆದರೂ ಪತ್ತೆ ಆಗಿರಲಿಲ್ಲ. ಇಂದು ಮುಂಜಾನೆ ಮತ್ತೆ ಸ್ಥಳೀಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಕಾಯರ್ತಡ್ಕದಿಂದ ಅಮ್ಮಿನಡ್ಕ ಕಡೆಗೆ ಬಂದಿರುವುದು ತಿಳಿದು ಬಂದಿರುವುದರಿಂದ ಮನೆಯವರು ಮತ್ತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮಧ್ಯಾಹ್ನ ನಂತರ ಅರಸಿನಮಕ್ಕಿ- ಶಿಶಿಲ ಶೌರ್ಯ ವಿಪತ್ತು ತಂಡದ ಸದಸ್ಯರೊಂದಿಗೆ ಕುದ್ದ ಸಮೀಪ ಇರುವ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಶವವಾಗಿ ಪತ್ತೆಯಾಗಿದೆ.

ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಊಹೆ ಮಾಡಿಕೊಳ್ಳುತ್ತಿದ್ದು ನೈಜ ಕಾರಣ ಇನ್ನಷ್ಟೇ ತನಿಖೆಯ ಮೂಲಕ ತಿಳಿಯಬೇಕಿದೆ.ಮೃತರು ಪುತ್ರ ಶಿವರಾಂ, ಪುತ್ರಿಯರಾದ ವೇದಾವತಿ, ಕುಸುಮ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya
error: Content is protected !!