ಶಾಲಾ ಕಾಲೇಜು

ಕೆಪಿಎಸ್ ಪುಂಜಾಲಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನ ಕಾರ್ಯಕ್ರಮ

ಬೆಳ್ತಂಗಡಿ : ಕೆಪಿಎಸ್ ಪುಂಜಾಲಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನ ಕಾರ್ಯಕ್ರಮ ಜು.15ರಂದು ನೆರವೇರಿತು

. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಎಳವೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಂಡರೆ ಜೀವನದಲ್ಲಿ ಬಹಳ ಎತ್ತರಕ್ಕೆ ಬೆಳೆಯುವುದಕ್ಕೆ ಸಾಧ್ಯ. ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆ ಇದಕ್ಕೆ ಪೂರಕ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಮಡಂತ್ಯಾರ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜೋಯಲ್ ಮೆಂಡೋನ್ಸ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒತ್ತು ನೀಡಿದಲ್ಲಿ ಅದ್ಭುತವಾದ ಪ್ರಗತಿ ಹೊಂದಲು ಸಾಧ್ಯ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಮಾತನಾಡಿದಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೂಪ ನವೀನ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಪ್ರಸ್ತಾವಿಕ ಸ್ವಾಗತಿಸಿ ಈ ಸಂದರ್ಭದಲ್ಲಿ 2025 ನೇ ಮಾರ್ಚ್ ತಿಂಗಳಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ 38 ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಿ ಪುರಷ್ಕರಿಸಲಾಯಿತು. ಡಾ. ವಾಸಂತಿ ಎಂ ಕೆ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕಿ ಸುಪ್ರೀತ ವಂದಿಸಿದರು. ಉಪನ್ಯಾಸಕಿ ತಾಹೀರಬಾನು ನಿರೂಪಿಸಿದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ, ಒಂಬತ್ತನೇ ವರ್ಷದ ” ಸ್ಕೌಟ್ ಗಣಪತಿ” ಪೂಜೆ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya
error: Content is protected !!