July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆಯು ಶಾಸಕ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ,ವೈದ್ಯಾಧಿಕಾರಿ ಡಾ.ರಮೇಶ್ ಸ್ವಾಗತಿಸಿದರು., ಆರೋಗ್ಯಾಧಿಕಾರಿಯಾದ ಡಾ.ಸಂಜಾತ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಬಂಕಪ್ಪ, ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕ್ಲೆಮೆಂಟ್ ಬೆಂಜಮಿನ್ ಬ್ರಾಗ್ಸ್, ಡಾ.ಶಶಿಕಾಂತ್ ಡೋಂಗ್ರೆ, ಡಾ.ಶಶಾಂಕ್, ಡಾ.ತಾರಕೇಶ್ವರಿ, ಡಾ.ಆಶಾಲತಾ, ಡಾ.ಹೇಮಲತಾ, ಡಾ.ರಶ್ಮಿ ಉಪಸ್ಥಿತರಿದ್ದರು.


ಸಭೆಯಲ್ಲಿ ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಮೂಲಭೂತ ಸೌಕರ್ಯಗಳಿಗೆ ಸರಕಾರದಿಂದ ಅನುದಾನ ಪಡೆಯಲು ಅಂದಾಜು ಪಟ್ಟಿ ತಯಾರಿಸುವಂತೆ ಸಭೆಯಲ್ಲಿ ತಿಳಿಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಔಷಧವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಲು ಬರೆದು ಮಾಹಿತಿ ನೀಡುವಂತೆ ತಿಳಿಸಲಾಯಿತು.ಕೊರತೆ ಇರುವ ಔಷಧವನ್ನು ಇಲಾಖೆಯಿಂದ ತಕ್ಷಣ ತರಿಸುವಂತೆ ಹೇಳಿದರು. ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ವಾಹನವನ್ನು ನಿಲ್ಲಿಸುವುದರಿಂದ ತೊಂದರೆ ಆಗುತ್ತಿದೆ ಕೂಡಲೇ ಕ್ರಮ ವಹಿಸುವಂತೆ ತಿಳಿಸಿದರು.
ಒಳರೋಗಿ ಮತ್ತು ಹೊರರೋಗಿಗಳಿಗೆ ಪ್ರತ್ಯೇಕ ಕೌಂಟರ್ ಮಾಡುವಂತೆ ಸಭೆಯಲ್ಲಿ ಸದಸ್ಯರು ತಿಳಿಸಿದರು.ಆಸ್ಪತ್ರೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಬೇಕೆಂದು ತಿಳಿಸಿದರು.


ರಕ್ಷಾ ಸಮಿತಿ ಸದಸ್ಯರಾದ ನವೀನ್ ಗೌಡ ಸವಣಾಲು, ಸೆಬಾಸ್ಟಿಯನ್ ಪಿ.ಟಿ., ವೆಂಕಣ್ಣ ಕೊಯ್ಯೂರು, ವೀರೆಂದ್ರ ಕುಮಾರ್ ಜೈನ್, ಅಬ್ದುಲ್ ರಶೀದ್ ಕಕ್ಕಿಂಜೆ, ಸ್ಟೀವನ್ ಮೋನಿಸ್, ಶ್ರೀಮತಿ ಸವಿತಾ ಸುಲ್ಕೇರಿ, ಆರೋಗ್ಯಾಧಿಕಾರಿ ಕಛೇರಿಯ ಸಿಬ್ಬಂದಿ ಅಜಯ್ ಕಲ್ಲೇಗ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!