July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

ಮುಂಡಾಜೆ : ಕೇಂದ್ರೀಯ ಮೀಸಲು ಪಡೆ (CRPF Group center) ಯಲಹಂಕ ಬೆಂಗಳೂರು ಇದರ ಸಬ್ ಇನ್ಸ್ಪೆಕ್ಟರ್ ಹನುಮಂತರಾಜ್ ಇವರ ನೇತೃತ್ವದಲ್ಲಿ ಸಿ ಆರ್.ಪಿ ಎಫ್ ನಲ್ಲಿ 1991ರಿಂದ 1998 ರ ತನಕ ಸಿ ಆರ್ ಪಿ ಸೇವೆಯನ್ನು ಸಲ್ಲಿಸಿ ದಿನಾಂಕ 14/07/1998 ರಂದು ದೇಶ ಸೇವೆಯಲ್ಲಿ ತೊಡಗಿರುವಾಗ ಹುತಾತ್ಮರಾದ ಮೋಹನ್ ದಾಸನ್ ಇವರು ಮುಂಡಾಜೆ ಪ್ರೌಢಶಾಲೆ ಮುಂಡಾಜೆಯ ಹಿರಿಯ ವಿದ್ಯಾರ್ಥಿ, ಇವರ ಸ್ಮರಣ ಪುಣ್ಯತಿಥಿಯನ್ನು ಅವರ ಭಾವಚಿತ್ರ ಅನಾವರಣದೊಂದಿಗೆ ಮುಂಡಾಜೆ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ CRPF GC ಬೆಂಗಳೂರು ಯಲಹಂಕ ಇದರ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಹನುಮಂತರಾಜು ಇವರು ಭಾಗವಹಿಸಿ ವೀರಯೋಧನಿಗೆ ನಮನವನ್ನು ಸಲ್ಲಿಸಿ ವಿದ್ಯಾರ್ಥಿಗಳಿಗೆ ರಾಷ್ಟ್ರಪ್ರೇಮದ ಬಗ್ಗೆ ಸೇನೆಯ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸಂಚಾಲಕ ನಾರಾಯಣ ಪಡ್ಕೆ, ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಸದಸ್ಯರಾದ ವಿಶ್ವನಾಥ ಶೆಟ್ಟಿ, ಮುಂಡಾಜೆಯ ಕಾರ್ಗಿಲ್ ವನ ಇದರ ಸ್ಥಾಪಕ ಸಚಿನ್ ಭೀಡೆ, ಶಿಕ್ಷಕರು, ಸಿಬ್ಬಂದಿ ವರ್ಗದವರು ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ ಸ್ವಾಗತಿಸಿ, ಸಹ ಶಿಕ್ಷಕ ಸುರೇಶ್ ಎಂ.ಟಿ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕಿ ಶ್ರೀಮತಿ ಪಾರ್ವತಿ ಯು ಧನ್ಯವಾದವಿತ್ತರು. ಶಿಕ್ಷಕ ಆನಂದ ಜಿ, ಗುಣಪಾಲ್ ಎಮ್.ಎಸ್. ಶ್ರೀಮತಿ ಸಹನಾ ಶ್ರೀಮತಿ ಪದ್ಮಲತಾ ಸಹಕರಿಸಿದರು.

Related posts

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
error: Content is protected !!