September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

ಮುಂಡಾಜೆ : ಕೇಂದ್ರೀಯ ಮೀಸಲು ಪಡೆ (CRPF Group center) ಯಲಹಂಕ ಬೆಂಗಳೂರು ಇದರ ಸಬ್ ಇನ್ಸ್ಪೆಕ್ಟರ್ ಹನುಮಂತರಾಜ್ ಇವರ ನೇತೃತ್ವದಲ್ಲಿ ಸಿ ಆರ್.ಪಿ ಎಫ್ ನಲ್ಲಿ 1991ರಿಂದ 1998 ರ ತನಕ ಸಿ ಆರ್ ಪಿ ಸೇವೆಯನ್ನು ಸಲ್ಲಿಸಿ ದಿನಾಂಕ 14/07/1998 ರಂದು ದೇಶ ಸೇವೆಯಲ್ಲಿ ತೊಡಗಿರುವಾಗ ಹುತಾತ್ಮರಾದ ಮೋಹನ್ ದಾಸನ್ ಇವರು ಮುಂಡಾಜೆ ಪ್ರೌಢಶಾಲೆ ಮುಂಡಾಜೆಯ ಹಿರಿಯ ವಿದ್ಯಾರ್ಥಿ, ಇವರ ಸ್ಮರಣ ಪುಣ್ಯತಿಥಿಯನ್ನು ಅವರ ಭಾವಚಿತ್ರ ಅನಾವರಣದೊಂದಿಗೆ ಮುಂಡಾಜೆ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ CRPF GC ಬೆಂಗಳೂರು ಯಲಹಂಕ ಇದರ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಹನುಮಂತರಾಜು ಇವರು ಭಾಗವಹಿಸಿ ವೀರಯೋಧನಿಗೆ ನಮನವನ್ನು ಸಲ್ಲಿಸಿ ವಿದ್ಯಾರ್ಥಿಗಳಿಗೆ ರಾಷ್ಟ್ರಪ್ರೇಮದ ಬಗ್ಗೆ ಸೇನೆಯ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸಂಚಾಲಕ ನಾರಾಯಣ ಪಡ್ಕೆ, ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಸದಸ್ಯರಾದ ವಿಶ್ವನಾಥ ಶೆಟ್ಟಿ, ಮುಂಡಾಜೆಯ ಕಾರ್ಗಿಲ್ ವನ ಇದರ ಸ್ಥಾಪಕ ಸಚಿನ್ ಭೀಡೆ, ಶಿಕ್ಷಕರು, ಸಿಬ್ಬಂದಿ ವರ್ಗದವರು ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ ಸ್ವಾಗತಿಸಿ, ಸಹ ಶಿಕ್ಷಕ ಸುರೇಶ್ ಎಂ.ಟಿ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕಿ ಶ್ರೀಮತಿ ಪಾರ್ವತಿ ಯು ಧನ್ಯವಾದವಿತ್ತರು. ಶಿಕ್ಷಕ ಆನಂದ ಜಿ, ಗುಣಪಾಲ್ ಎಮ್.ಎಸ್. ಶ್ರೀಮತಿ ಸಹನಾ ಶ್ರೀಮತಿ ಪದ್ಮಲತಾ ಸಹಕರಿಸಿದರು.

Related posts

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

Suddi Udaya

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya
error: Content is protected !!