March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲೆಯ ಪರಿಸರ ಸಂಘ, ಸ್ಕೌಟ್ ಅಂಡ್ ಗೈಡ್ ನ ವಿದ್ಯಾರ್ಥಿಗಳು ಮತ್ತು ಸಂಸ್ಕೃತಿಕ ಸಂಘದ ಸದಸ್ಯರು ಭತ್ತದ ಗದ್ದೆಯಲ್ಲಿ ಸೇರಿ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಸ್ಕೌಟ್ ಅಂಡ್ ಗೈಡ್, ಪರಿಸರ ಸಂಘ ಮತ್ತು ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಗೆ ಶಾರೀರಿಕ ಚಟುವಟಿಗೆಗೆ ಪ್ರೋತ್ಸಾಹ ನೀಡುವ ಜೊತೆಗೆ, ಮಕ್ಕಳಲ್ಲಿ ತಂಡಭಾವನೆ ಹಾಗೂ ಸ್ನೇಹ ಭಾವ, ಸ್ಪರ್ಧಾತ್ಮಕ ಮನೋಭಾವವೂ ಬೆಳೆಯುವ ಪರಿಸರ ಒದಗಿಸಲಾಗಿತ್ತು.


ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ಸದಸ್ಯರು ಗದ್ದೆಯ ಬದುವನ್ನು ಸರಿಪಡಿಸಿ, ಕಲ್ಲು ಹಾಗೂ ಕಸವನ್ನು ತೆಗೆದು, ಮಣ್ಣನ್ನು ಹದಗೊಳಿಸಿ ನಾಟಿಗೆ ಅಣಿಗೊಳಿಸಿದರು.


ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳ ಜೊತೆಗೆ ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳು ತುಳುನಾಡು ನುಡಿಗೆ ಸಂಬಂಧಿಸಿದ ನೃತ್ಯಗಳನ್ನು ಪ್ರದರ್ಶಿಸಿದರು.ಅಡಿಕೆ ಹಾಳೆಯಲ್ಲಿ ಕುಳಿತು ಕೆಸರಿನಲ್ಲಿ ಎಳೆಯುವ ಆಟ, ಕೆಸರು ಗದ್ದೆ ಓಟ ಇತ್ಯಾದಿ ವಿವಿಧ ವಿನೋದಾವಳಿ ಆಟಗಳನ್ನು ಆಡಿ ವಿದ್ಯಾರ್ಥಿಗಳು ಸಂತಸ ಪಟ್ಟರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮವನ್ನು ಶಾಲೆಯ ಸ್ಕೌಟ್ ಅಂಡ್ ಗೈಡ್ ಉಸ್ತುವಾರಿ ಶಿಕ್ಷಕರು, ಪರಿಸರ ಸಂಘದ ಶಿಕ್ಷಕರು ಮತ್ತು ಸಾಂಸ್ಕೃತಿಕ ಸಂಘದ ಶಿಕ್ಷಕರು ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya
error: Content is protected !!