25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲೆಯ ಪರಿಸರ ಸಂಘ, ಸ್ಕೌಟ್ ಅಂಡ್ ಗೈಡ್ ನ ವಿದ್ಯಾರ್ಥಿಗಳು ಮತ್ತು ಸಂಸ್ಕೃತಿಕ ಸಂಘದ ಸದಸ್ಯರು ಭತ್ತದ ಗದ್ದೆಯಲ್ಲಿ ಸೇರಿ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಸ್ಕೌಟ್ ಅಂಡ್ ಗೈಡ್, ಪರಿಸರ ಸಂಘ ಮತ್ತು ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಗೆ ಶಾರೀರಿಕ ಚಟುವಟಿಗೆಗೆ ಪ್ರೋತ್ಸಾಹ ನೀಡುವ ಜೊತೆಗೆ, ಮಕ್ಕಳಲ್ಲಿ ತಂಡಭಾವನೆ ಹಾಗೂ ಸ್ನೇಹ ಭಾವ, ಸ್ಪರ್ಧಾತ್ಮಕ ಮನೋಭಾವವೂ ಬೆಳೆಯುವ ಪರಿಸರ ಒದಗಿಸಲಾಗಿತ್ತು.


ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ಸದಸ್ಯರು ಗದ್ದೆಯ ಬದುವನ್ನು ಸರಿಪಡಿಸಿ, ಕಲ್ಲು ಹಾಗೂ ಕಸವನ್ನು ತೆಗೆದು, ಮಣ್ಣನ್ನು ಹದಗೊಳಿಸಿ ನಾಟಿಗೆ ಅಣಿಗೊಳಿಸಿದರು.


ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳ ಜೊತೆಗೆ ಪರಿಸರ ಸಂಘದ ಹಾಗೂ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳು ತುಳುನಾಡು ನುಡಿಗೆ ಸಂಬಂಧಿಸಿದ ನೃತ್ಯಗಳನ್ನು ಪ್ರದರ್ಶಿಸಿದರು.ಅಡಿಕೆ ಹಾಳೆಯಲ್ಲಿ ಕುಳಿತು ಕೆಸರಿನಲ್ಲಿ ಎಳೆಯುವ ಆಟ, ಕೆಸರು ಗದ್ದೆ ಓಟ ಇತ್ಯಾದಿ ವಿವಿಧ ವಿನೋದಾವಳಿ ಆಟಗಳನ್ನು ಆಡಿ ವಿದ್ಯಾರ್ಥಿಗಳು ಸಂತಸ ಪಟ್ಟರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮವನ್ನು ಶಾಲೆಯ ಸ್ಕೌಟ್ ಅಂಡ್ ಗೈಡ್ ಉಸ್ತುವಾರಿ ಶಿಕ್ಷಕರು, ಪರಿಸರ ಸಂಘದ ಶಿಕ್ಷಕರು ಮತ್ತು ಸಾಂಸ್ಕೃತಿಕ ಸಂಘದ ಶಿಕ್ಷಕರು ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!