ಅಳದಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರೀ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಬಡಗಕಾರಂದೂರು ಸ. ಉ. ಪ್ರಾ.ಶಾಲೆಯಲ್ಲಿ ಶ್ರೀಮತಿ ಆಶಾ ಹರೀಶ್ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಪೂಜಾ ಸಮಿತಿ ರಚನೆಯಾಯಿತು.
ವೇದಿಕೆಯಲ್ಲಿ ಎ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲ್ಯಾನ್ ಬಿ., ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ, ಹರೀಶ್ ಆಚಾರ್ಯ, ಎ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್, ಬಿ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಪ್ರಮೋದ್, ಜನಜಾಗೃತಿ ಅಧ್ಯಕ್ಷ ಯಶೋಧರ ಸುವರ್ಣ, ಎ. ಬಿ. ಒಕ್ಕೂಟದ ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನವಾಗಿ ಅಧ್ಯಕ್ಷರಾಗಿ ಶ್ರೀಮತಿ ರೇಖಾ ರಾಜಶೇಖರ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಪುಷ್ಪ ಆನಂದ ಆಚಾರ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ ಉಮೇಶ್ ಕುಲಾಲ್, ಕೋಶಾಧಿಕಾರಿಯಾಗಿ ಶ್ರೀಮತಿ ಸುನೀತಾ ಶ್ರೀಧರ್, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಸುಮಿತ್ರ ಆಯ್ಕೆ ಮಾಡಲಾಯಿತು.
ಶ್ರೀನಿವಾಸ್ ಸ್ವಾಗತಿಸಿ, ಮಂಜುನಾಥ ಆಚಾರ್ಯ ನಿರೂಪಿಸಿದರು.











