23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಳೆಂಜ: ಜು.14ರಂದು ನಾಪತ್ತೆಯಾಗಿದ್ದ ಕಳೆಂಜ ಗ್ರಾಮದ ರೆಂಜದಡಿ ಮನೆ ನಿವಾಸಿ ಜಿನ್ನಪ್ಪ ಗೌಡ(76) ರವರ ಶವ ಜು.15ರಂದು ಪತ್ತೆಯಾಗಿದೆ.

ಜು.14ರಂದು ಕಾಣೆಯಾಗಿದ್ದ ಜಿನ್ನಪ್ಪ ಗೌಡ ಅವರ ಪತ್ತೆಗಾಗಿ ಅವರ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಆದರೂ ಪತ್ತೆ ಆಗಿರಲಿಲ್ಲ. ಇಂದು ಮುಂಜಾನೆ ಮತ್ತೆ ಸ್ಥಳೀಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಕಾಯರ್ತಡ್ಕದಿಂದ ಅಮ್ಮಿನಡ್ಕ ಕಡೆಗೆ ಬಂದಿರುವುದು ತಿಳಿದು ಬಂದಿರುವುದರಿಂದ ಮನೆಯವರು ಮತ್ತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮಧ್ಯಾಹ್ನ ನಂತರ ಅರಸಿನಮಕ್ಕಿ- ಶಿಶಿಲ ಶೌರ್ಯ ವಿಪತ್ತು ತಂಡದ ಸದಸ್ಯರೊಂದಿಗೆ ಕುದ್ದ ಸಮೀಪ ಇರುವ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಶವವಾಗಿ ಪತ್ತೆಯಾಗಿದೆ.

ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಊಹೆ ಮಾಡಿಕೊಳ್ಳುತ್ತಿದ್ದು ನೈಜ ಕಾರಣ ಇನ್ನಷ್ಟೇ ತನಿಖೆಯ ಮೂಲಕ ತಿಳಿಯಬೇಕಿದೆ.ಮೃತರು ಪುತ್ರ ಶಿವರಾಂ, ಪುತ್ರಿಯರಾದ ವೇದಾವತಿ, ಕುಸುಮ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
error: Content is protected !!