25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಳೆಂಜ: ಜು.14ರಂದು ನಾಪತ್ತೆಯಾಗಿದ್ದ ಕಳೆಂಜ ಗ್ರಾಮದ ರೆಂಜದಡಿ ಮನೆ ನಿವಾಸಿ ಜಿನ್ನಪ್ಪ ಗೌಡ(76) ರವರ ಶವ ಜು.15ರಂದು ಪತ್ತೆಯಾಗಿದೆ.

ಜು.14ರಂದು ಕಾಣೆಯಾಗಿದ್ದ ಜಿನ್ನಪ್ಪ ಗೌಡ ಅವರ ಪತ್ತೆಗಾಗಿ ಅವರ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದರು. ಆದರೂ ಪತ್ತೆ ಆಗಿರಲಿಲ್ಲ. ಇಂದು ಮುಂಜಾನೆ ಮತ್ತೆ ಸ್ಥಳೀಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಕಾಯರ್ತಡ್ಕದಿಂದ ಅಮ್ಮಿನಡ್ಕ ಕಡೆಗೆ ಬಂದಿರುವುದು ತಿಳಿದು ಬಂದಿರುವುದರಿಂದ ಮನೆಯವರು ಮತ್ತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮಧ್ಯಾಹ್ನ ನಂತರ ಅರಸಿನಮಕ್ಕಿ- ಶಿಶಿಲ ಶೌರ್ಯ ವಿಪತ್ತು ತಂಡದ ಸದಸ್ಯರೊಂದಿಗೆ ಕುದ್ದ ಸಮೀಪ ಇರುವ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಶವವಾಗಿ ಪತ್ತೆಯಾಗಿದೆ.

ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಊಹೆ ಮಾಡಿಕೊಳ್ಳುತ್ತಿದ್ದು ನೈಜ ಕಾರಣ ಇನ್ನಷ್ಟೇ ತನಿಖೆಯ ಮೂಲಕ ತಿಳಿಯಬೇಕಿದೆ.ಮೃತರು ಪುತ್ರ ಶಿವರಾಂ, ಪುತ್ರಿಯರಾದ ವೇದಾವತಿ, ಕುಸುಮ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya
error: Content is protected !!