23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

ಉಜಿರೆ: ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ವಿಧ್ಯಾರ್ಥಿಗಳ ಸಂಘಟನೆ ಯಾದ ಎಸ್.ಬಿ.ಎಸ್(ಸುನ್ನೀ ಬಾಲ ಸಂಘ) ಇದರ ನಾಯಕತ್ವ ಚುನಾವಣೆ ಯೂ ಇತ್ತೀಚೆಗೆ ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮೀತಿ ಅಧ್ಯಕ್ಷ ಹುಸೈನ್ ತಂಗಳ್ ನೇತ್ರತ್ವದಲ್ಲಿ ನಡೆಯಿತು.

ಮುಖ್ಯ ಗುರುಗಳಾದ ಉಮರುಲ್ ಫಾರೂಖ್ ಸಅದಿ ಸ್ವಾಗತಿಸಿ ಚುನಾವಣಾ ಮಾಹಿತಿಯನ್ನು ವಿಧ್ಯಾರ್ಥಿ ಗಳೊಂದಿಗೆ ನೀಡಿದರು. ಅಧ್ಯಾಪಕರು ಹಾಗೂ ಆಡಳಿತ ಸಮಿತಿಯ ನಾಯಕರು, ಯಂಗ್ ಮೆನ್ಸ್ ಸದಸ್ಯರು ಚುನಾವಣಾ ಯಶಸ್ವಿಯಾಗಿ ಸಹಕರಿದರು‌. ಪ್ರಸ್ತುತ ಚುನಾವಣೆಯಲ್ಲಿ 7 ವಿಧ್ಯಾರ್ಥಿಗಳು ಸ್ಪರ್ಧಿಸಿದರು. ಮುಹಮ್ಮದ್ ಉವೈಸ್ ಖಲಂದರ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು. ಪ್ರ.ಕಾರ್ಯದರ್ಶಿ ಯಾಗಿ ಮುಹಮ್ಮದ್ ಮಿಸ್ರಾಫ್ ಹಾಗೂ ಕೋಶಾಧಿಕಾರಿಯಾಗಿ ಮುಹಮ್ಮದ್ ಶಹೀಂ ಅಲಿ ಸೈಟ್ ಆಯ್ಕೆಯಾದರು.

ಅಲ್ ಬುಖಾರಿ ಪ್ರ.ಕಾರ್ಯದರ್ಶಿ ಸುಲೈಮಾನ್ ಬದ್ರಿಯಾ ಮುಖ್ಯ ಚುನಾವಣಾ ವೀಕ್ಷಕರಾಗಿ ಸಹಕರಿಸಿದರು. ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಸಂದೇಶ ಭಾಷಣ ಮಾಡಿದರು.ಸಭೆಯಲ್ಲಿ ಕತ್ತರ್ ಮುಹಮ್ಮದ್ ಹಾಜಿ, ಮೊಯ್ದೀನ್ ಕುಕ್, ಹನೀಫ್ ಡ್ರೈವರ್ ಕುಂಟಿನಿ, ಮುಹಿಯುದ್ದೀನ್ ನಜಾತ್,ರಝಾಖ್ ಕುಂಟಿನಿ, ಸಿದ್ದೀಖ್ ವಾಫಿರ್,ಸಿಕಂದರ್ ಕಲ್ಯಾಣಪುರ,ಅಬೂಬಕ್ಕರ್ ಪಂಡಿತ್, ಮುಹಮ್ಮದ್ ಅಲಿ ಉಜಿರೆ, ಶಂಶುದ್ದೀನ್ ನಾಡ್ಜೆ, ರಫೀಖ್ ಕುಂಟಿನಿ, ಅಶ್ರಫ್ ಮೇಸ್ತ್ರಿ ಯೂಸುಫ್ ಹಲೇಜಿ ಸಹಿತ ಜಮಾಅತ್ತ್ ನಾಯಕರು ಉಪಸ್ಥಿತರಿದ್ದರು.ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಗೋಳಿಯಂಗಡಿ ಚುನಾವಣಾ ಫಲಿತಾಂಶ ವನ್ನು ಘೋಷಿಸಿದರು. ಹಸೈನಾರ್ ಉಸ್ತಾದ್ ಕಕ್ಕಿಂಜೆ ಧನ್ಯವಾದವಿತ್ತರು.

Related posts

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!