ಶಾಲಾ ಕಾಲೇಜು

ಕೆಪಿಎಸ್ ಪುಂಜಾಲಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನ ಕಾರ್ಯಕ್ರಮ

ಬೆಳ್ತಂಗಡಿ : ಕೆಪಿಎಸ್ ಪುಂಜಾಲಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳ ಪ್ರತಿಭಾಪ್ರದರ್ಶನ ಕಾರ್ಯಕ್ರಮ ಜು.15ರಂದು ನೆರವೇರಿತು

. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಎಳವೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಂಡರೆ ಜೀವನದಲ್ಲಿ ಬಹಳ ಎತ್ತರಕ್ಕೆ ಬೆಳೆಯುವುದಕ್ಕೆ ಸಾಧ್ಯ. ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆ ಇದಕ್ಕೆ ಪೂರಕ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಮಡಂತ್ಯಾರ್ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜೋಯಲ್ ಮೆಂಡೋನ್ಸ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒತ್ತು ನೀಡಿದಲ್ಲಿ ಅದ್ಭುತವಾದ ಪ್ರಗತಿ ಹೊಂದಲು ಸಾಧ್ಯ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಮಾತನಾಡಿದಮಡಂತ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೂಪ ನವೀನ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಪ್ರಸ್ತಾವಿಕ ಸ್ವಾಗತಿಸಿ ಈ ಸಂದರ್ಭದಲ್ಲಿ 2025 ನೇ ಮಾರ್ಚ್ ತಿಂಗಳಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ 38 ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಿ ಪುರಷ್ಕರಿಸಲಾಯಿತು. ಡಾ. ವಾಸಂತಿ ಎಂ ಕೆ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕಿ ಸುಪ್ರೀತ ವಂದಿಸಿದರು. ಉಪನ್ಯಾಸಕಿ ತಾಹೀರಬಾನು ನಿರೂಪಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya
error: Content is protected !!