38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇವರು ಕೊಡ ಮಾಡುವ ಹಳ್ಳೂರು ಹನುಮಂತಪ್ಪ ವರಮಹಾಲಕ್ಷ್ಮಮ್ಮ ರಾಜ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರಿಸಲ್ಪಟ್ಟ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಗೆ ನೀಡಲಾಗಿದೆ.

ರಾಜ್ಯದ ಪ್ರತಿಷ್ಠಿತ ಪತ್ರಿಕೆ ‘ವಿಜಯವಾಣಿ ‘ಪತ್ರಿಕೆಯಿಂದ ಜಿಲ್ಲಾವಾರು ಆರಿಸಲ್ಪಟ್ಟಂತಹ ಸಾಧಕರಿಗೆ ಇದನ್ನು ನೀಡಲಾಗಿದೆ. ಗಮಕ, ಯಕ್ಷಗಾನ, ವಿವಿಧ ಕಲಾ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಗೆ ಈ ಪ್ರಶಸ್ತಿಯನ್ನು ಜು. 6 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಸಮಾರಂಭದಲ್ಲಿ ಮಠಾಧಿಪತಿಗಳ ದಿವ್ಯ ಸಾನಿಧ್ಯದಲ್ಲಿ, ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು. ಮೋಹನ ಕಲ್ಲೂರಾಯರ ಪರವಾಗಿ ಅವರ ಪುತ್ರ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ಬೆಂಗಳೂರಿನಲ್ಲಿ ಸನ್ಮಾನವನ್ನು ಸ್ವೀಕರಿಸಿದರು.ಮಧೂರು ಮೋಹನ ಕಲ್ಲೂರಾಯರು ದ.ಕ ಜಿಲ್ಲೆಯ ಕರ್ನಾಟಕ ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾಗಿದ್ದಾರೆ.

Related posts

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!