23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇವರು ಕೊಡ ಮಾಡುವ ಹಳ್ಳೂರು ಹನುಮಂತಪ್ಪ ವರಮಹಾಲಕ್ಷ್ಮಮ್ಮ ರಾಜ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರಿಸಲ್ಪಟ್ಟ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಗೆ ನೀಡಲಾಗಿದೆ.

ರಾಜ್ಯದ ಪ್ರತಿಷ್ಠಿತ ಪತ್ರಿಕೆ ‘ವಿಜಯವಾಣಿ ‘ಪತ್ರಿಕೆಯಿಂದ ಜಿಲ್ಲಾವಾರು ಆರಿಸಲ್ಪಟ್ಟಂತಹ ಸಾಧಕರಿಗೆ ಇದನ್ನು ನೀಡಲಾಗಿದೆ. ಗಮಕ, ಯಕ್ಷಗಾನ, ವಿವಿಧ ಕಲಾ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯರಿಗೆ ಈ ಪ್ರಶಸ್ತಿಯನ್ನು ಜು. 6 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಸಮಾರಂಭದಲ್ಲಿ ಮಠಾಧಿಪತಿಗಳ ದಿವ್ಯ ಸಾನಿಧ್ಯದಲ್ಲಿ, ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು. ಮೋಹನ ಕಲ್ಲೂರಾಯರ ಪರವಾಗಿ ಅವರ ಪುತ್ರ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ಬೆಂಗಳೂರಿನಲ್ಲಿ ಸನ್ಮಾನವನ್ನು ಸ್ವೀಕರಿಸಿದರು.ಮಧೂರು ಮೋಹನ ಕಲ್ಲೂರಾಯರು ದ.ಕ ಜಿಲ್ಲೆಯ ಕರ್ನಾಟಕ ಗಮಕ ಕಲಾ ಪರಿಷತ್ತಿನ ಅಧ್ಯಕ್ಷರಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!