July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಇಂದಬೆಟ್ಟು ವಲಯದ ನಾವೂರು ವಿಭಾಗದ ಅಲೆಕ್ಕಿಯಲ್ಲಿ ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರಿಯಾ ಲಕ್ಷ್ಮಣ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಹೇಮಾವತಿ ಹೆಗ್ಗಡೆಯವರು ಪ್ರಾರಂಭಿಸಿದ ಜ್ಞಾನ ವಿಕಾಸ ಕಾರ್ಯಕ್ರಮ ಮಹಿಳೆಯರಿಗೆ ಉತ್ತಮ ಮಾಹಿತಿಯೊಂದಿಗೆ ಆತ್ಮ ಸ್ಥೈರ್ಯ ವನ್ನು ಹೆಚ್ಚಿಸುತ್ತದೆ ಮಹಿಳೆಯ ಪ್ರತಿಭೆಯನ್ನು ಹೊರಹಾಕಲು ಕೇಂದ್ರವು ಉತ್ತಮ ವೇದಿಕೆಯಾಗಿದೆ ಎಂದರು.

ಮೇಲ್ವಿಚಾರಕರಾದ ಉಷಾ ರವರು ಎಲ್ಲರೂ ಕೇಂದ್ರದ ಸಭೆಯಲ್ಲಿ ಆಸಕ್ತಿ ಯಿಂದ ಭಾಗವಹಿಸುವಂತೆ ತಿಳಿಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್ ರವರು ಜ್ಞಾನ ವಿಕಾಸ ಕೇಂದ್ರದ ಧ್ಯೇಯೋದ್ದೇಶಗಳು ಕೇಂದ್ರದ ಸಭೆಯಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಯೋಜಕಿ ರೋಹಿಣಿ ಉಪಸ್ಥಿತರಿದ್ದರು ಗುಲಾಬಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುನೀತಾ ಸ್ವಾಗತಿಸಿ ಸೇವಾಪ್ರತಿನಿಧಿ ಪುಷ್ಪ ಧನ್ಯವಾದ ನೀಡಿದರು.

Related posts

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya
error: Content is protected !!